ರಾಯಚೂರು: 30 ಗುಂಟೆ ಜಮೀನು ಮಾರಾಟದ ವಿಚಾರವಾಗಿ 2 ಗುಂಪುಗಳು ಮನಬಂದಂತೆ ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ಸಿಂಧನೂರು ತಾಲೂಕು ವಿರುಪಾಪೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶರಣಪ್ಪ ಮತ್ತು ನಿರುಪಾದಿ ಕುಟುಂಬದ ನಡುವೆ ಈ ಘರ್ಷಣೆ ನಡೆದಿದೆ. ಶರಣಪ್ಪ ಎಂಬಾತ ನಿರುಪಾದಿಗೆ 30 ಗುಂಟೆ ಜಮೀನು ಮಾರಾಟದ ಬಗ್ಗೆ ಒಪ್ಪಂದ ಆಗಿತ್ತು. ಈ ಹಿನ್ನೆಲೆ ನಿರುಪಾದಿ ಒಪ್ಪಂದದಂತೆ ಮುಂಗಡವಾಗಿ ಶರಣಪ್ಪಗೆ 3 ಲಕ್ಷ ರೂ. ನೀಡಿದ್ದಾನೆ. ಹಣ ಪಡೆದ ಶರಣಪ್ಪಗೆ ಜಮೀನು ಮಾರಾಟ ಮಾಡದಂತೆ ಮನೆಯಲ್ಲಿ ತಕರಾರು ಮಾಡಿದ್ದರು. ಇದನ್ನೂ ಓದಿ: ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ
ಶರಣಪ್ಪ ಮನೆಯಲ್ಲಿ ತಕರಾರು ಮಾಡಿದ್ದರಿಂದ ನಿರುಪಾದಿಗೆ ಹಣ ವಾಪಸ್ ನೀಡಿದ್ದಾರೆ. ಈ ವೇಳೆ ಹಣ ವಾಪಸ್ ಪಡೆದ ನಿರುಪಾದಿ ಏಕಾಏಕಿ ಗುಂಪು ಕಟ್ಟಿಕೊಂಡು ಬಂದು ಜಗಳ ತೆಗೆದಿದ್ದಾನೆ. ಜಗಳವು ತಾರಕಕ್ಕೇರಿದ್ದು 2 ಗುಂಪುಗಳು ರಾಡು, ಕಟ್ಟಿಗೆಯಿಂದ ಮನಬಂದಂತೆ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರೆಸ್ಟ್
ಶರಣಪ್ಪ ಕಡೆಯವರ ಮೇಲೆ ನಿರುಪಾದಿ ಕಡೆಯವರು ಹಲ್ಲೆ ಮಾಡಿರುವ ಆರೋಪ ವ್ಯಕ್ತವಾಗಿದೆ. ಗಾಯಾಳುಗಳಾದ ಗೋವಿಂದಪ್ಪ, ಶಿವರಾಜ್, ಅಂಬರೀಶ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.