ರಾಯಚೂರು: ನಗರದ ಹೊರವಲಯದ ಲಿಂಗಸುಗೂರು ರಸ್ತೆ ಬೈಪಾಸ್ ನಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಕುರಿಗಳಿಗೆ ಕಾರು (Car Accident) ಡಿಕ್ಕಿಹೊಡೆದು 30 ಕುರಿಗಳು ಸಾವನ್ನಪ್ಪಿದ್ದು, 10 ಕುರಿ (Sheep) ಗಳಿಗೆ ಕಾಲು ಮುರಿದಿದೆ.
ಕುರಿಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಯಾಪಲದಿನ್ನಿಯ ಜಗನ್ನಾಥ ಎಂಬವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಯಾಪಲದಿನ್ನಿಯಿಂದ ಕಲ್ಲೂರಿಗೆ ಹೊರಟಿದ್ದ ಕುರಿಗಾಯಿಗಳು, ರಾತ್ರಿ ವೇಳೆ ರಸ್ತೆ ಪಕ್ಕದಲ್ಲಿ ಕುರಿಗಳನ್ನ ನಿಲ್ಲಿಸಿದ್ದರು. ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, 120 ಕುರಿಗಳಲ್ಲಿ 21 ಕುರಿಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಆಸ್ಟ್ರೆಲಿಯಾದಲ್ಲಿ ಮತ್ತೆ ಖಲಿಸ್ತಾನಿಯರ ಅಟ್ಟಹಾಸ – ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ದಾಳಿ
ಅಪಘಾತದಿಂದ ಸುಮಾರು ಮೂರೂವರೆ ಲಕ್ಷ ರೂಪಾಯಿ ಬೆಲೆ ಬಾಳುವ ಕುರಿಗಳು ಸಾವನ್ನಪ್ಪಿವೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗೋವಾದಿಂದ ಹೈದರಾಬಾದ್ಗೆ ಹೊರಟಿದ್ದ ಕಾರು ಕುರಿಗಳಿಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದ್ದು, ರಾಯಚೂರು ಪಶ್ಚಿಮ ಪೊಲೀಸ್ ಠಾಣೆ (West Police Station Raichur) ಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k