ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 300 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 1 ಮರಣ ಪ್ರಕರಣ ದಾಖಲಾಗಿದೆ. ಏಕೈಕ ಮರಣ ಪ್ರಕರಣ ಉಡುಪಿಯಲ್ಲಿ ದಾಖಲಾಗಿದೆ.
ರಾಜ್ಯದಲ್ಲಿ ಒಟ್ಟು 279 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,140 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,02,427 ಮಂದಿಗೆ ಕೊರೊನಾ ಬಂದಿದೆ. 29,56,970 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.33 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇದನ್ನೂ ಓದಿ: ಅಕ್ಕ-ಪಕ್ಕದಲ್ಲಿ ಓಮಿಕ್ರಾನ್ ಹಾವಳಿ ಇದ್ದರೂ ಕೊಡಗಿನಲ್ಲಿ ಪ್ರವಾಸಿಗರದ್ದೇ ದರ್ಬಾರ್
ರಾಜ್ಯದಲ್ಲಿ ಇಂದು ಒಟ್ಟು 61,982 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,12,524 ಸ್ಯಾಂಪಲ್ (ಆರ್ಟಿಪಿಸಿಆರ್ 93,726 + 18,798 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಗಮನಿಸಿ, ಹಳೆಯ 100 ರೂ. ನೋಟ್ ಬ್ಯಾನ್ ಆಗಲ್ಲ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 168, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 9, ಚಿತ್ರದುರ್ಗ 4, ದಕ್ಷಿಣ ಕನ್ನಡ 37, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 0, ಕೊಡಗು 10, ಕೋಲಾರ 9, ಕೊಪ್ಪಳ 0, ಮಂಡ್ಯ 2, ಮೈಸೂರು 13, ರಾಯಚೂರು 4, ರಾಮನಗರ 0, ಶಿವಮೊಗ್ಗ 2, ತುಮಕೂರು 7, ಉಡುಪಿ 2, ಉತ್ತರ ಕನ್ನಡ 8, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.