ಬೆಂಗಳೂರು: ರಾಜ್ಯದ ವಿವಿಧ ಜೈಲಿನಿಂದ ಸನ್ನಡತೆ (Good Conduct) ಆಧಾರದ ಮೇಲೆ 31 ಕೈದಿಗಳನ್ನು (Prisoners) ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು 2, ಬೆಳಗಾವಿ 2, ಕಲಬುರಗಿ 2, ಶಿವಮೊಗ್ಗ 1, ವಿಜಯಪುರ 5, ಬಳ್ಳಾರಿ 3, ಧಾರವಾಡ 1, ಶಿವಮೊಗ್ಗ ಮಹಿಳಾ ಬ್ಯಾರೆಕ್ನಿಂದ ಒಬ್ಬರನ್ನು ಬಿಡುಗಡೆಗೆ ಆದೇಶ ಮಾಡಲಾಗಿದೆ. ಇದನ್ನೂ ಓದಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
ರಾಜ್ಯದ 9 ಕಾರಾಗೃಹ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಆದೇಶ ಮಾಡಲಾಗಿದೆ. 54 ಜೀವಾವಧಿ ಶಿಕ್ಷಾ ಬಂಧಿಗಳ ವ್ಯಕ್ತಿತ್ವ & ನಡತೆ ಪರಿಶೀಲಿಸಿ 31 ಜನ ಕೈದಿಗಳ ಬಿಡುಗಡೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್ಗೆ ಜಾಮೀನು
ಅವಧಿ ಪೂರ್ವ ಬಿಡುಗಡೆಯಾಗುತ್ತಿರುವ ಬಂಧಿಗಳು:
ಶ್ರೀನಿವಾಸ್ ಅಲಿಯಾಸ್ ಡ್ರೈವರ್ ಶ್ರೀನಿವಾಸ್, ಬಾಲರಾಜು, ವೆಂಕಟೇಶ್, ರಂಜಿತ್ @ ಬಟ್ಟ, ಭುವನೇಶ್ವರ ಟಿಪಿ, ಛತ್ರಪತಿ ನಾಯಕ್, ಲಿಂಗರಾಜು, ಶ್ರೀನಿವಾಸ್ ಮೂರ್ತಿ, ಯಮನಪ್ಪ, ನಿಲಕಂಠಾಚಾರ್ @ ಶಂಕರ್, ಬಾಬು, ರಾಜಾಚಾರಿ, ನಾರಾಯಣಗೌಡ, ವೆಂಕಟೇಶ್, ಚಂದ್ರಮ್ಮ, ತುಕಾರಾಮ್, ಜಯಮ್ಮ, ಸುಭಾಷ್, ತಿಮ್ಮಪ್ಪ, ಅಶೋಕ್, ಶಿವಪ್ಪ, ಆನಂದ, ಪ್ರಕಾಶ್, ಸುರೇಶ್, ಹೆಚ್ಕೆ ರವಿಕುಮಾರ್, ಜಿ.ಎಲ್ ಮೋಹನ್ ಕುಮಾರ್, ಮಂಜೆ ನಾಯ್ಕ್, ಲಕ್ಷ್ಮಿ ಕಾಂತ್, ಸರಸ್ವತಿ ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗುತ್ತಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಕುರಿತು ಹೇಳಿಕೆ – ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

