ಡೆಹರಾಡೂನ್: ಮುಂದಕ್ಕೆ ಚಲಿಸಬೇಕಾಗಿದ್ದ ಶತಾಬ್ದಿ ಎಕ್ಸ್ ಪ್ರೆಸ್ ರೈಲು ತಾಂತ್ರಿಕ ದೋಷದಿಂದ ಹಿಂದಕ್ಕೆ ಚಲಿಸಿದ ಘಟನೆ ಉತ್ತರಾಖಂಡದಲ್ಲಿ ಬುಧವಾರ ನಡೆದಿದೆ.
ದೆಹಲಿಯಿಂದ ತನಕಪುರಕ್ಕೆ ತೆರಳಲುತ್ತಿದ್ದ ಪೂರ್ಣಗಿರಿ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲು ತಾಂತ್ರಿಕ ದೋಷದಿಂದ 35ಕಿ.ಮೀ ಹಿಂದಕ್ಕೆ ಚಲಿಸಿದೆ. ಅದೃಷ್ಟವಶತ್ ಈ ಘಟನೆಯಿಂದ ಯಾವುದೇ ಅಪಘಾತ ಸಂಭವಿಸಿಲ್ಲ. ಅಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 60-70 ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಹಾಗೂ ಎಲ್ಲರು ಅನಾಹುತದಿಂದ ಪಾರಾಗಿದ್ದಾರೆ. ಸದ್ಯ ಪ್ರಯಾಣಿಕರೆಲ್ಲರನ್ನು ಸುರಕ್ಷಿತವಾಗಿ ಚಕ್ರಪುರಕ್ಕೆ ಕರೆದೊಯ್ದು ಬಸ್ ಮೂಲಕ ಕಳುಹಿಸಲಾಯಿತು.
ಈ ಕುರಿತಂತೆ ಈಶಾನ್ಯ ರೈಲ್ವೆ, ಈ ಘಟನೆಯು 2021ರ ಮಾರ್ಚ್17ರಂದು ಖತಿಮಾ-ತನಕ್ಪುರ ವಿಭಾಗದಲ್ಲಿ ಜಾನುವಾರುಗಳು ರೈಲಿನ ಮಧ್ಯೆ ಓಡಿಹೋದ್ದರಿಂದ ಘಟನೆ ಸಂಭವಿಸಿದ್ದು, ರೈಲನ್ನು ಖತಿಮಾದಲ್ಲಿ ನಿಲ್ಲಿಸಲಾಯಿತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ತನಕ್ಪುರಕ್ಕೆ ಕಳುಹಿಕೊಡಲಾಗಿದ್ದು, ನಂತರ ಲೊಕೊ ಪೈಲಟ್ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಘಟನೆ ವಿಚಾರವಾಗಿ ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ವರ ಸಿಂಗ್, ಪ್ರಾಣಿಗಳ ಜೀವ ಉಳಿಸಲು ತಕ್ಷಣ ಬ್ರೇಕ್ ಹಾಕಿದಾಗ ಮುಂದಕ್ಕೆ ಚಲಿಸುತ್ತಿದ್ದ ರೈಲು ತಾಂತ್ರಿಕ ದೋಷದಿಂದ ವಿರುದ್ಧ ದಿಕ್ಕಿಗೆ ಚಲಿಸಿದೆ. ಹೀಗಾಗಿ ಚಕರ್ಪುರದಲ್ಲಿ ರೈಲನ್ನು ನಿಲ್ಲಿಸಲಾಯಿತು ಎಂದು ಹೇಳಿದ್ದಾರೆ.
https://youtu.be/4x6T3wfhqzM
ಇದು ಉತ್ತರಾಖಂಡದಲ್ಲಿ ಈ ವಾರ ಸಂಭವಿಸಿದ 2ನೇ ಘಟನೆಯಾಗಿದ್ದು, ಶನಿವಾರ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಈ ವೇಳೆ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಗಳಾಗಲಿಲ್ಲ.