ಕೋಲ್ಕತ್ತಾ: ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ ಹಾಗೂ ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 3,500 ಕೋಟಿ ರೂ. ದಂಡ ವಿಧಿಸಿದೆ.
2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡುತ್ತಿಲ್ಲ ಎಂದು ಹಸಿರು ನ್ಯಾಯಪೀಠ ಹೇಳಿದೆ. ಇದನ್ನೂ ಓದಿ: ಹಿರಿಯ ಖ್ಯಾತ ವೈದ್ಯ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ
ಭವಿಷ್ಯದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಗಮನಿಸಿ ಎನ್ಜಿಟಿ ಅಧ್ಯಕ್ಷ ನ್ಯಾಯಮೂತಿ ಎ.ಕೆ.ಗೋಯೆಲ್ ನೇತೃತ್ವದ ಪೀಠವು ಜನರಿಗಾಗಿ ಮಾಲಿನ್ಯ ಮುಕ್ತ ವಾತಾವರಣ ಕಲ್ಪಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂಬುದನ್ನು ಒತ್ತಿ ಹೇಳಿದೆ. ಇದನ್ನೂ ಓದಿ: ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು 4 ಲಕ್ಷ ರೂ. ಖರ್ಚು!
ನಗರ ಪ್ರದೇಶಗಳಲ್ಲಿ ದಿನಕ್ಕೆ 2,758 ಮಿಲಿಯನ್ ಲೀಟರ್ ಕೊಳಚೆ ಉತ್ಪಾದನೆಯಾಗುತ್ತಿದೆ. ಈ ಪೈಕಿ 1,505 ಮಿಲಿಯನ್ ಲೀಟರ್ನಷ್ಟು ಕೊಳಚೆ ಸಂಸ್ಕರಿಸುವ ಸಾಮರ್ಥ್ಯವಿದೆ. ಆದರೂ ದಿನಕ್ಕೆ 1,268 ಲೀಟರ್ ನಷ್ಟು ತ್ಯಾಜ್ಯವನ್ನು ಮಾತ್ರವೇ ಸಂಸ್ಕರಿಸಲಾಗುತ್ತಿದ್ದು, ಉಳಿದ 1,490 ಮಿಲಿಯನ್ ಲೀಟರ್ ನಷ್ಟು ತ್ಯಾಜ್ಯ ಹಾಗೆಯೇ ಉಳಿಸುತ್ತಿದೆ ಎಂದು ಎನ್ಜಿಟಿ ತಿಳಿಸಿದೆ.
ಇದರಿಂದ ಪರಿಸರಕ್ಕೆ ಉಂಟಾಗುವ ಹಾನಿಯನ್ನು ಗಮನಿಸಿ ರಾಜ್ಯದಿಂದ 2 ತಿಂಗಳ ಒಳಗೆ ದಂಡ ಪಾವತಿ ಮಾಡಬೇಕು ಎನ್ಜಿಟಿ ತಾಕೀತು ಮಾಡಿದೆ.