ಶ್ರೀಲಂಕಾ ನೌಕಾಪಡೆಯಿಂದ 37 ಭಾರತೀಯ ಮೀನುಗಾರರ ಬಂಧನ – 5 ದೋಣಿಗಳು ವಶ

Public TV
2 Min Read
Sri Lanka Fishermen

ಕೊಲಂಬೊ: ಶ್ರೀಲಂಕಾ ನೌಕಾಪಡೆಯು (Sri Lanka Navy) ಭಾನುವಾರ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 37  ಭಾರತೀಯ ಮೀನುಗಾರರನ್ನು (Indian Fishermen) ಬಂಧಿಸಿದ್ದು, ಐದು ದೋಣಿಗಳನ್ನು (Boat) ವಶಪಡಿಸಿಕೊಂಡಿದೆ.

ಗೌಪ್ಯ ಮೂಲಗಳ ಪ್ರಕಾರ, ಶ್ರೀಲಂಕಾದ ನೀರಿನಲ್ಲಿ ಚೀನಾದ ನೌಕಾಪಡೆಯ ಬೇಹುಗಾರಿಕಾ ಹಡಗು ಲಂಗರು ಹಾಕಿದ ನಂತರ ನೌಕಾಪಡೆಯು ಗಸ್ತು ಚಟುವಟಿಕೆಗಳನ್ನು ತೀವ್ರಗೊಳಿಸಿದೆ. ಮೊದಲನೇ ಪ್ರಕರಣದಲ್ಲಿ ತಲೈಮನ್ನಾರ್ ಬಳಿ ಮೀನುಗಾರಿಕೆ ನಡೆಸುತ್ತಿದ್ದ ರಾಮೇಶ್ವರಂನ (Rameswaram) 23 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸುತ್ತುವರಿದಿವೆ. ನಂತರ ಅವರನ್ನು ಬಂಧಿಸಿದ್ದು, ಅವರ ಮೂರು ದೋಣಿಗಳನ್ನು ತಲೈಮನ್ನಾರ್ ನೌಕಾ ಶಿಬಿರಕ್ಕೆ ಕರೆದೊಯ್ಯುವ ಮೊದಲು ವಶಪಡಿಸಿಕೊಳ್ಳಲಾಯಿತು. ಇದನ್ನೂ ಓದಿ: ಹಾಟ್‍ಟಬ್‍ನಲ್ಲಿ ನಟ ಶವವಾಗಿ ಪತ್ತೆ

ಮತ್ತೊಂದು ಘಟನೆಯಲ್ಲಿ ನೆಡುಂತೀವು ಬಳಿ 14 ಮೀನುಗಾರರನ್ನು ಬಂಧಿಸಲಾಗಿದ್ದು, ಅವರ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಅವರನ್ನು ಮಾಯಿಲಟ್ಟಿ ಶಿಬಿರಕ್ಕೆ ಕರೆದೊಯ್ಯಲಾಗಿದೆ. ಅಕ್ಟೋಬರ್ 14 ರಿಂದ, ಶ್ರೀಲಂಕಾ ನೌಕಾಪಡೆಯು 64 ಮೀನುಗಾರರನ್ನು ಬಂಧಿಸಿದೆ ಮತ್ತು ಪ್ರತ್ಯೇಕ ಘಟನೆಗಳಲ್ಲಿ 10 ದೋಣಿಗಳನ್ನು ವಶಪಡಿಸಿಕೊಂಡಿದೆ. ಇದನ್ನೂ ಓದಿ: ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ – 32 ಮಂದಿ ಸಜೀವ ದಹನ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಶನಿವಾರ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಅವರಿಗೆ ಪತ್ರ ಬರೆದಿದ್ದು, ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ವಶದಲ್ಲಿರುವ 12 ಮೀನುಗಾರರನ್ನು ಮತ್ತು ಅವರ ಮೀನುಗಾರಿಕಾ ದೋಣಿಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಗುಂಡಿನ ದಾಳಿ ನಡೆಸಿದ್ದ ಶೂಟರ್ 2 ದಿನಗಳ ಬಳಿಕ ಶವವಾಗಿ ಪತ್ತೆ
ಅಕ್ಟೋಬರ್ 1 ರಂದು ತೂತುಕುಡಿ ಜಿಲ್ಲೆಯಿಂದ ಮೀನುಗಾರಿಕೆಗೆ ತೆರಳಿದ ಮೀನುಗಾರರನ್ನು ಅಕ್ಟೋಬರ್ 23 ರಂದು ಬಂಧಿಸಲಾಯಿತು ಎಂದು ಪತ್ರದಲ್ಲಿ ಸ್ಟಾಲಿನ್ ಉಲ್ಲೇಖಿಸಿದ್ದಾರೆ. ಅವರನ್ನು ಬಿಡುಗಡೆ ಮಾಡಲು ಮಾಲ್ಡೀವ್ಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವಂತೆ ಜೈಶಂಕರ್ ಅವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ದಾಳಿ ನಡೆಸಿ ಹಮಾಸ್‌ ಕಮಾಂಡರ್‌ ಹತ್ಯೆ; 36 ಮಂದಿ ಬಂಧಿಸಿದ ಇಸ್ರೇಲ್‌ ರಕ್ಷಣಾ ಪಡೆ

Web Stories

Share This Article