Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರಕ್ಕೆ 376 ಕೋಟಿ ರೂ. ಅನುದಾನ, ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ: ಬೈರತಿ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರಕ್ಕೆ 376 ಕೋಟಿ ರೂ. ಅನುದಾನ, ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ: ಬೈರತಿ ಸುರೇಶ್

Districts

ಕೋಲಾರಕ್ಕೆ 376 ಕೋಟಿ ರೂ. ಅನುದಾನ, ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ: ಬೈರತಿ ಸುರೇಶ್

Public TV
Last updated: September 19, 2024 4:13 pm
Public TV
Share
2 Min Read
Byrathi Suresh
SHARE

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ (Congress) ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ (Kolar) ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ರೂ. ಅನುದಾನ ಕೊಟ್ಟಿದ್ದೇವೆ. ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಕೇಳಿದಷ್ಟು ಅನುದಾನ ಕೊಡಲು ಸರ್ಕಾರವು ಸಿದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದರು.

ಜಿಲ್ಲೆಯ ನರಸಾಪುರ (Narasapura) ಗ್ರಾಮದಲ್ಲಿ ನಾಲ್ಕು ಪಥದ ರಸ್ತೆಗೆ 7 ಕೋಟಿ ರೂ., ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ರೂ. ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ರೂ. ಸೇರಿದಂತೆ ಒಟ್ಟು 13.5 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೆರೆಸಿದರು.ಇದನ್ನೂ ಓದಿ: ಶನಿವಾರ ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ವಚನ

ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಲ್ಕು ಪಥದ ರಸ್ತೆಗೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ. ಆದರೆ ಜನಕ್ಕೆ ಕಣ್ಣಾಮುಂದೆಯೇ ಅಭಿವೃದ್ಧಿಯಾಗುವುದು ಕಾಣುತ್ತಿದೆ ಎಂದರು.

ಹಿಂದಿನ ಬಿಜೆಪಿ (BJP) ಸರ್ಕಾರದಲ್ಲಿ 40% ಕಮಿಷನ್‌ನಿಂದ ಅಭಿವೃದ್ಧಿ ಶೂನ್ಯವಾಗಿತ್ತು. ನಮ್ಮ ಸರಕಾರವು ಯಾರಪ್ಪನ ಮನೆಯಿಂದ ಕೂಡ ಹಣ ತಂದಿಲ್ಲ. ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ. ಜೆಡಿಎಸ್ ಮತ್ತು ಬಿಜೆಪಿ ಸರ್ಕಾರದಲ್ಲಿ ಅವರಿಗೆ ತಿನ್ನಲು ಸಾಕಾಗಲಿಲ್ಲ. ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು. ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ. ಜನರ ಸೇವೆ ಮಾಡಲು ಬಂದಿದ್ದು, ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದ್ದೇವೆ. ಬಡವರ, ಜನಸಾಮಾನ್ಯರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ. ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ. ಸರ್ಕಾರವು ಬಿದ್ದು ಹೋಗುತ್ತದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ. ಜನಕ್ಕೆ ಅಭಿವೃದ್ಧಿ ಯಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಕಿಡಿಕಾರಿದ್ದಾರೆ.

ಇದೇ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ, ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ. ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು. ಕಳಪೆ ಕೆಲಸವಾದರೆ ದೂರು ನೀಡಬೇಕು. ಮಾಧ್ಯಮದವರ ಗಮನಕ್ಕೆ ತರಬೇಕು ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು. ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು, ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದೆ. ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಶಂಶೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.

TAGGED:byrathi sureshcongressKolarNarasapuraಕಾಂಗ್ರೆಸ್ಕೋಲಾರನರಸಾಪುರಬೈರತಿ ಸುರೇಶ್
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

kalaburagi gun dance
Kalaburagi

ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Public TV
By Public TV
4 hours ago
Raichuru Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Public TV
By Public TV
4 hours ago
CJ Roy
Bengaluru City

ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

Public TV
By Public TV
5 hours ago
MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
5 hours ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
5 hours ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?