388 ಪಾಸಿಟಿವ್, 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

Public TV
1 Min Read
Corona Vaccine 1 1

ಬೆಂಗಳೂರು: ಇಂದು ಕರ್ನಾಟಕದಲ್ಲಿ 388 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 470 ಜನ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಕೊರೊನಾಗೆ ಬಲಿಯಾಗಿದ್ದಾರೆ.

3a206fa5 bccb 4cd0 9567 c335e3e7dd4e

ಇಂದು ಹಾವೇರಿ, ದಾವಣಗೆರೆ, ಧಾರವಾಡ, ಗದಗ, ಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,39,775ಕ್ಕೆ ಏರಿಕೆ ಆಗಿದೆ. ಈ ಪೈಕಿ 9,21,592 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5944 ಸಕ್ರಿಯ ಪ್ರಕರಣಗಳಿವೆ.

1980deca 44f3 4180 8661 69c142728a72

ಒಟ್ಟು ಇಲ್ಲಿಯವರೆಗೆ 12,220 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 145 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 2195 ಆಂಟಿಜನ್ ಟೆಸ್ಟ್, 51,121 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 53,316 ಮಂದಿಗೆ ಪರೀಕ್ಷೆ ಮಾಡಲಾಗಿದೆ.

2331826b ae82 4ad9 97c7 5cd5c56aeba1

ಎಂದಿನಂತೆ ಬೆಂಗಳೂರು ನಗರದಲ್ಲಿ 201 ಮಂದಿಗೆ ಸೋಂಕು ಬಂದಿದೆ. ಚಿಕ್ಕಬಳ್ಳಾಪುರ ಕೊಡಗು 27, ಮೈಸೂರು 13, ತುಮಕೂರು 27 ಮಂದಿಗೆ ಸೋಂಕು ಬಂದಿದೆ. ಒಟ್ಟು 145 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 68 ದಾರವಾಡ 5, ಗದಗ 4 ಮಂದಿ, ಉಡುಪಿಯಲ್ಲಿ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *