ರಾಜ್ಯದಲ್ಲಿ ಇಂದು 397 ಕೇಸ್- ಮರಣ ಪ್ರಮಾಣ 3.27%ಕ್ಕೆ ಏರಿಕೆ

Public TV
1 Min Read
CORONA

ಬೆಂಗಳೂರು: ರಾಜ್ಯದಲ್ಲಿ ಇಂದು ನಿನ್ನೆಗಿಂತ ಕಡಿಮೆ ಪ್ರಕರಣ ದಾಖಲಾಗಿದ್ದು, 397 ಹೊಸ ಕೊರೊನಾ ಕೇಸ್ ದಾಖಲಾಗಿದೆ. 13 ಮಂದಿ ಸಾವನ್ನಪ್ಪಿದರೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.3.27ಕ್ಕೆ ಏರಿಕೆ ಕಂಡಿದೆ.

CORONA REPORT IN 10 04 2021 2

ರಾಜ್ಯದಲ್ಲಿ 693 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 11,992 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,78,286 ಮಂದಿಗೆ ಕೊರೊನಾ ಬಂದಿದೆ. 29,28,433 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.50ರಷ್ಟಿದೆ. ಇದನ್ನೂ ಓದಿ: ಮತಾಂತರ ಮಾಡುತ್ತಿರುವವರನ್ನು ಒದ್ದು ಓಡಿಸಬೇಕು: ಪ್ರಮೋದ್ ಮುತಾಲಿಕ್

CORONA REPORT IN 10 04 2021

ಇಂದು ರಾಜ್ಯದಲ್ಲಿ ಒಟ್ಟು 1,85,051 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 78,958 ಸ್ಯಾಂಪಲ್ (ಆರ್‍ಟಿ ಪಿಸಿಆರ್ 65,239 + 13,719 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಸೋಂಕಿನ ಸಂಖ್ಯೆ ನೂರಕ್ಕಿಂತ ಕಡಿಮೆ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 166 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 5 ಜನ ಮರಣ ಹೊಂದಿದ್ದಾರೆ. 121 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಬ್ರಹ್ಮ ರಸಾಯಣ, ಅಶ್ವ ಗಂಧಿ ಲೇಹಂ – ದೇವರ ಪ್ರಸಾದದ ಹೆಸರಲ್ಲಿ ಡ್ರಗ್ಸ್ ದಂಧೆ

CORONA REPORT IN 10 04 2021 1

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 16, ಚಿತ್ರದುರ್ಗ 2, ದಕ್ಷಿಣ ಕನ್ನಡ 45, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 33, ಹಾವೇರಿ 1,ಕಲಬುರಗಿ 1, ಕೊಡಗು 25, ಕೋಲಾರ 11, ಕೊಪ್ಪಳ 0, ಮಂಡ್ಯ 11, ಮೈಸೂರು 40, ಶಿವಮೊಗ್ಗ 12, ತುಮಕೂರು 7, ಉಡುಪಿ 6, ಉತ್ತರ ಕನ್ನಡ 12 ವಿಜಯನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

Share This Article
Leave a Comment

Leave a Reply

Your email address will not be published. Required fields are marked *