Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿನ್ನದು 4 ಎಕ್ರೆ, ನನ್ನದು 40 ಎಕ್ರೆ ಹಾಳಾಗಿದೆ – ಕಷ್ಟ ಹೇಳಿದ ರೈತನಿಗೆ ಗದರಿದ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಿನ್ನದು 4 ಎಕ್ರೆ, ನನ್ನದು 40 ಎಕ್ರೆ ಹಾಳಾಗಿದೆ – ಕಷ್ಟ ಹೇಳಿದ ರೈತನಿಗೆ ಗದರಿದ ಖರ್ಗೆ

Districts

ನಿನ್ನದು 4 ಎಕ್ರೆ, ನನ್ನದು 40 ಎಕ್ರೆ ಹಾಳಾಗಿದೆ – ಕಷ್ಟ ಹೇಳಿದ ರೈತನಿಗೆ ಗದರಿದ ಖರ್ಗೆ

Public TV
Last updated: September 7, 2025 8:35 pm
Public TV
Share
3 Min Read
Mallikarjun Kharge 2
SHARE

– ಮೋದಿಗೆ ಅಹಂಕಾರ ಜಾಸ್ತಿ, ಆ ಅಹಂಕಾರವೇ ಅವರನ್ನ ತಿನ್ನುತ್ತೆ ಅಂತ ಲೇವಡಿ
– ಕಳೆದ ಚುನಾವಣೆಯಲ್ಲಿ ಮಹಾಮೋಸ ನಡೆದಿದೆ – ಇವಿಎಂ ನಿಷೇಧ ಸ್ವಾಗತಿಸಿದ ಖರ್ಗೆ

ಕಲಬುರಗಿ: ಸಮಸ್ಯೆ ಹೇಳಿಕೊಂಡು ಬಂದ ವ್ಯಕ್ತಿ ವಿರುದ್ಧ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಗರಂ ಆದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ (Kalaburagi) ತಮ್ಮ ನಿವಾಸದಲ್ಲಿ ಖರ್ಗೆ ಮಾಧ್ಯಮದವರೊಂದಿಗೆ ಮಾತನಾಡಬೇಕಾದ್ರೆ ರೈತರೊಬ್ಬರು (Farmer) ಬಂದು ಸರ್ ತೊಗರಿ ಬೆಳೆ ಹಾನಿಯಾಗಿದೆ. ನಷ್ಟ ಉಂಟಾಗಿದೆ ಎಂದು ಅಳಲುತೊಡಿಕೊಂಡಿದ್ದಾರೆ. ಈ ವೇಳೆ, ಗರಂ ಆದ ಖರ್ಗೆ, ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯಾ? ತೊಗರಿ ಅಷ್ಟೆ ಅಲ್ಲ, ಉದ್ದು, ಹೆಸರು ಕೂಡ ಹಾಳಾಗಿದ್ದು ನನಗೆ ಗೊತ್ತಿದೆ. 6 ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು ಎಂದು ವ್ಯಕ್ತಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಹೋಗಿ ಮೋದಿ, ಶಾಗೆ ಕೇಳಿ ಅಂತ ಹೇಳಿದ್ದಾರೆ. ಖರ್ಗೆ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Mallikarjun Kharge

ಕೇಂದ್ರ ನಮ್ಮ ಬೇಡಿಕೆಗೆ ಕಿವಿಗೊಡಲಿಲ್ಲ
ಇದೇ ವೇಳೆ ಕೇಂದ್ರ ಸರ್ಕಾರ 2 ಸ್ಲ್ಯಾಬ್‌ಗಳಲ್ಲಿ ಜಿಎಸ್‌ಟಿ (GST) ಕಡಿತದ ಬಗ್ಗೆ ಮಾತನಾಡಿದ ಖರ್ಗೆ, ಕಳೆದ ಎಂಟು ವರ್ಷಗಳಿಂದ ನಾವು ಜಿಎಸ್‌ಟಿ ಕಡಿತಕ್ಕಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗೆ ಕಿವಿಗೊಡಲಿಲ್ಲ. ಸದ್ಯ ಏಕಾಏಕಿ ಕಡಿತ ಮಾಡಿದ್ದಾರೆ. ಇದಕ್ಕೆ ನಿಜವಾದ ಕಾರಣ ಮೋದಿಗೇ ಗೊತ್ತು ಅಂತಾ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿಗೆ ಅಹಂಕಾರ ಜಾಸ್ತಿ
ಕೇಂದ್ರ ಹಾಗೂ ರಾಜ್ಯದ ಹಲವು ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿಗೆ ಅಹಂಕಾರ ಜಾಸ್ತಿ. ನಾವು ಏನು ಮಾಡಿದರೂ ನಡೆಯುತ್ತದೆ ಅನ್ನೋ ಮನೋಭಾವ ಅವರದ್ದು. ಆದರೆ, ಆ ಅಹಂಕಾರವೇ ಅವರನ್ನ ತಿನ್ನಲಿದೆ ಎಂದು ಲೇವಡಿ ಮಾಡಿದರು.

GST 2

ವಿದೇಶಾಂಗ ನೀತಿಯಲ್ಲಿ ಮೋದಿ ನಡೆಸುತ್ತಿರುವ ತಂತ್ರಗಳ ಕುರಿತು ವ್ಯಂಗ್ಯವಾಡಿದ ಖರ್ಗೆ, ಮಾತ್ತೆತಿದ್ರೆ ಟ್ರಂಪ್ ಟ್ರಂಪ್ ಅಂತಾರೆ. ಟ್ರಂಪ್ ಬೆಳಗಾದರೆ ಫೋನ್ ಮಾಡ್ತಾರೆ ಎಂದು ಹೇಳುತ್ತಾರೆ. ಆದರೆ, ಇವತ್ತು ಏನಾಗಿದೆ? ಚೀನಾವನ್ನು ಇಷ್ಟು ದಿನ ನೇಗ್ಲೆಕ್ಟ್ ಮಾಡಿ, ಈಗ ಅದೇ ದೇಶಕ್ಕೆ ಮೋದಿ ಹೋಗಿ ಬಂದಿದ್ದಾರೆ. ದೇಶಕ್ಕೆ ಸಮಸ್ಯೆ ಬಂದಾಗ ನಾವೆಲ್ಲ ಒಂದಾಗಿ ಬೆಂಬಲ ನೀಡಿದ್ದೇವೆ. ಪೆಹಲ್ಗಾಮ್ ದಾಳಿ ಸಂದರ್ಭದಲ್ಲೂ ನಾವು ಕೇಂದ್ರಕ್ಕೆ ಬೆಂಬಲ ನೀಡಿದ್ದೇವೆ. ಆದರೆ, ಬಿಜೆಪಿ ನಾಯಕರು ಪ್ರತಿಬಾರಿ ‘ಮೋದಿ ಹೈ, ಮೋದಿ ಹೈ’ ಅಂತಾರೆ ಎಂದು ಆರೋಪಿಸಿದರು.

ಇನ್ನೂ ದ್ವೀಭಾಷಾ ಪದ್ಧತಿಯ ಕುರಿತಂತೆ ಮಾತನಾಡಿದ ಖರ್ಗೆ, ಇದು ಯಾವ ರಾಜ್ಯ, ಯಾವ ಇಲಾಖೆಯ ನಿರ್ಧಾರವೋ ಅದಕ್ಕೆ ಅವರಿಗೆ ಅಧಿಕಾರವಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯಾಗಿದೆ. ತಮಿಳುನಾಡು, ಕೇರಳದಲ್ಲಿ ಈ ವ್ಯವಸ್ಥೆಯನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ, ನಾವು ಕೇಂದ್ರದಲ್ಲಿ ಸರ್ಕಾರದಲ್ಲಿದ್ದಾಗ ರಾಷ್ಟ್ರೀಯ ಮಟ್ಟದಲ್ಲಿ ದ್ವಿಭಾಷಾ ಪದ್ಧತಿ ಅಳವಡಿಕೆ ಕುರಿತು ಚಿಂತನೆ ನಡೆಸಿದ್ದೆವು ಎಂದು ಹೇಳಿದರು.

EVM

ಇವಿಎಮ್ ನಿಷೇಧ ಶ್ಲಾಘನೀಯ:
ರಾಜ್ಯ ಸರ್ಕಾರ ಇವಿಎಮ್ ನಿಷೇಧಿಸಿ ಬ್ಯಾಲೆಟ್ ಪೇಪರ್ ಮರುಬಳಕೆಗೆ ಮುಂದಾಗಿರುವ ನಿರ್ಧಾರದ ಬಗ್ಗೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಇವಿಎಮ್‌ನಲ್ಲಿ ಮಹಾಮೋಸ ನಡೆದಿದೆ. ನಾನು ಕೂಡ ಸೋತಾಗ ಮತಗಳ್ಳತನವಾಗಿದೆ. ನನ್ನ ಅಭಿವೃದ್ಧಿ ಕಾರ್ಯಗಳಿಗೆ ಜನಮನ್ನಣೆ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಆದರೆ, ಕಲಬುರಗಿ ಲೋಕಸಭೆಯ ಐದಾರು ಕ್ಷೇತ್ರಗಳಲ್ಲಿ ಅಸಹಜವಾಗಿ ಕಡಿಮೆ ಮತಗಳು ಬಂದಿವೆ. ನಮ್ಮ ಕಣ್ಣೆದುರೇ ಮೋಸವಾಗಿದೆ. ಅಲ್ಲದೇ, ಪಾರ್ಲಿಮೆಂಟ್‌ನಲ್ಲೇ ಪ್ರಧಾನಿ ಮೋದಿ ‘ಖರ್ಗೆ ಬಹುತ್ ಬಾರ್ ಜಿತ್ರೆ’ ಎಂದಿದ್ದರು. ಮೋದಿ ಅವರ ಈ ಮಾತಿನ ಬಳಿಕ ನನಗೆ ಬಲವಾದ ಅನುಮಾನ ಬಂದಿದೆ. ಬಿಹಾರ, ಕಲಬುರಗಿ ಸೇರಿದಂತೆ ರಾಜ್ಯದ ಅನೇಕ ಕಡೆ ವೋಟ್ ಚೋರಿ ನಡೆದಿದೆ ಎಂದು ಆರೋಪಿಸಿದರು.

TAGGED:crop damagefarmerKalaburagimallikarjun khargeಇವಿಎಂಜಿಎಸ್‍ಟಿನರೇಂದ್ರ ಮೋದಿಮಲ್ಲಿಕಾರ್ಜುನ ಖರ್ಗೆರೈತರು
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
13 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
32 minutes ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
49 minutes ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
49 minutes ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
1 hour ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?