ಮುಂಬೈ: ಮೇಕೆ ಹಾಗೂ ಪಾರಿವಾಳಗಳನ್ನು ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ನಾಲ್ವರು ದಲಿತ ಯುವಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ದೊಣ್ಣೆಗಳಿಂದ ಥಳಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಹರೇಗಾಂವ್ ಎಂಬಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದಾಳಿಗೆ ಸಂಬಂಧಿಸಿದಂತೆ ಓರ್ವ ಅರೋಪಿಯನ್ನು ಬಂಧಿಸಿದ್ದು, ಐವರು ತಲೆಮರೆಸಿಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಯುವರಾಜ್ ಗಲಾಂಡೆ, ಮನೋಜ್ ಬೋಡಕೆ, ಪಪ್ಪು ಪರ್ಖೆ, ದೀಪಕ್ ಗಾಯಕವಾಡ, ದುರ್ಗೇಶ್ ವೈದ್ಯ ಮತ್ತು ರಾಜು ಬೋರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲಿ ಓರ್ವ ದಾಳಿಯ ವೀಡಿಯೋವನ್ನು ಚಿತ್ರೀಕರಿಸಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿತ ಮತ್ತಿನಲ್ಲಿ ಬ್ಲೇಡ್ನಿಂದ ಕೈ ಕೊಯ್ದುಕೊಂಡು ಯುವಕ ಸಾವು
ನಾಲ್ವರು ದಲಿತ ಯುವಕರು 20ರ ವಯಸ್ಸಿನ ಆಸುಪಾಸಿನವರಾಗಿದ್ದಾರೆ. ಅವರನ್ನು ಆ.25 ರಂದು ಆರು ಜನರ ಯುವಕರ ಗುಂಪು ಮನೆಯಿಂದ ಅಪಹರಿಸಿತ್ತು. ಸಂತ್ರಸ್ತರಲ್ಲಿ ಒಬ್ಬರಾದ ಶುಭಂ ಮಗಡೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆಗೆ ಯತ್ನ), 364 (ಅಪಹರಣ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ ಭಯೋತ್ಪಾದಕರು ತಲುಪದಂತೆ ನೋಡಿಕೊಳ್ಳಿ: ಚಕ್ರಪಾಣಿ ಮಹಾರಾಜ್
Web Stories