ನಾಲ್ಕು ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Public TV
1 Min Read
KSRTC

ಬೆಂಗಳೂರು: ಏಪ್ರಿಲ್ 18 ರಂದು ರಾಜ್ಯದ ದಕ್ಷಿಣ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ಸ್ವಲ್ಪ ವ್ಯತ್ಯಯವಾಗಲಿದೆ.

ಲೋಕಸಭೆಯ ಮೊದಲ ಹಂತದ ಚುನಾವಣೆಗೆ ಚುನಾವಣಾ ಆಯೋಗ ಒಟ್ಟು 3,314 ಕೆಎಸ್‌ಆರ್‌ಟಿಸಿ ಬಸ್‍ಗಳನ್ನು 3 ದಿನಗಳ ಕಾಲ ಬಳಸಿಕೊಳ್ಳಲಿದೆ. ಹೀಗಾಗಿ ಇಂದಿನಿಂದ 4 ದಿನಗಳವರೆಗೆ ಕೆಎಸ್‌ಆರ್‌ಟಿಸಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

vote b

ಚುನಾವಣಾ ಕೆಲಸಕ್ಕೆ ಬಸ್‍ಗಳು ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ. ಇದೇ ವೇಳೆ ವೋಲ್ವೋ ಹಾಗೂ ಇತರೇ ಐಷಾರಾಮಿ ಬಸ್‍ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಗುರುವಾರ ಚುನಾವಣೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *