ಕೊಪ್ಪಳ: ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೊಪ್ಪಳ (Koppala) ಜಿಲ್ಲೆಯ ಕೂಕುನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆ, ಇಬ್ಬರು ಪುರಷರು ಮೃತಪಟ್ಟಿದ್ದಾರೆ. ಇವರು ತೆಲಂಗಾಣ ಮೂಲದವರು ಎಂದು ಕೂಕುನೂರು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ
ಇವರು ಕೊಪ್ಪಳ ಜಿಲ್ಲೆಯಿಂದ ಗದಗ ಮಾರ್ಗವಾಗಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಮೃತರ ವಿವರ ಹುಡುಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k