ಮಂಡ್ಯ: ಮುತ್ತತ್ತಿಗೆ (Muthathi) ಪ್ರವಾಸ ಬಂದಿದ್ದ ಮೈಸೂರಿನ (Mysuru) ನಾಲ್ವರು ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿ ಜಲಸಮಾಧಿಯಾಗಿದ್ದಾರೆ.
ದುರಂತದಲ್ಲಿ ತಂದೆ ನಾಗೇಶ್(40), ಮಗ ಭರತ್(17) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹ ಪತ್ತೆ, ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆಯುತ್ತಿದ್ದು ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪಾಲಿಕೆ ಮೇಯರ್ ಚುನಾವಣೆಗೆ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿ ಗಿಫ್ಟ್ ಪಾಲಿಟಿಕ್ಸ್
ಮೈಸೂರಿನ ಕನಕಗಿರಿಯಿಂದ ಮಳವಳ್ಳಿ ತಾಲೂಕಿನ ಮುತ್ತತ್ತಿಗೆ ಒಂದೇ ಬಸ್ನಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿ 40 ಮಂದಿ ಪ್ರವಾಸ ಬಂದಿದ್ದರು. ನದಿಯಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.