ಭುವನೇಶ್ವರ: ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರು (Women) ಹಾಗೂ ಇಬ್ಬರು ಮಕ್ಕಳ (Children) ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿದ ಘಟನೆ ಓಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.
ಚಂದನ್ ರಾಣಾ ಆರೋಪಿ. ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಂಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ರಾಣಾ ತನ್ನ 2ನೇ ಪತ್ನಿಯನ್ನು ನೀಲಗಿರಿ ಪ್ರದೇಶದ ಸಂತರಗಡಿಯಾದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಲು ಮಾವನ ಮನೆಗೆ ಬಂದಿದ್ದ.
ಆದರೆ ಮಹಿಳೆಯು ಆತನೊಂದಿಗೆ ಹೋಗಲು ನಿರಾಕರಿಸಿದ್ದರಿಂದ ರಾಣಾ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಮಹಿಳೆಯ ರಕ್ಷಣೆಗೆ ಬಂದ ಆಕೆಯ ಅಕ್ಕನಿಗೂ ಆ್ಯಸಿಡ್ ಎರಚಿದ್ದಾನೆ. ದಾಳಿ ವೇಳೆ ಅಕ್ಕನ ಮಗ ಹಾಗೂ ಮಗಳು ಗಾಯಗೊಂಡಿದ್ದಾರೆ.
ಘಟನೆಯ ನಂತರ ಗಾಯಗೊಂಡ ನಾಲ್ವರನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಕ್ಕಳು ಹಾಗೂ ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು, ಆರೋಪಿಯ 2ನೇ ಪತ್ನಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: 10 ವರ್ಷದ ಫೀಸ್ ಕಟ್ಟೋಕೆ ಶಾಲೆಗಳಿಂದ ಆಫರ್ – ನಯಾ ಪ್ಲ್ಯಾನ್ಗೆ ಪೋಷಕರು ಕಂಗಾಲು
ಘಟನೆಯ ನಂತರ ಆರೋಪಿ ರಾಣಾ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೂಜೆ ವಿಷಯಕ್ಕೆ ಗಲಾಟೆ – ದೇವಾಲಯದಲ್ಲೇ ಗ್ರಾಮಸ್ಥರಿಂದ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k