ನವದೆಹಲಿ: 40 ಮಂದಿ ಓಮಿಕ್ರಾನ್ ರೋಗಿಗಳ ಚಿಕಿತ್ಸೆಗೆ ವಿಟಮಿನ್, ಪ್ಯಾರಾಸಿಟಮಾಲ್ ಮಾತ್ರೆಯನ್ನು ಕೊಟ್ಟು ಸೋಂಕಿಗೆ ಚಿಕಿತ್ಸೆ ನೀಡಲಾಗಿದೆ ಎಂದು ದೆಹಲಿಯ ವೈದ್ಯರೊಬ್ಬರು ಹೇಳಿದ್ದಾರೆ.
ಲೋಕ್ ನಾಯಕ ಜಯಪ್ರಕಾಶ್ ಆಸ್ಪತ್ರೆ, ದೆಹಲಿಯಲ್ಲಿನ ದೊಡ್ಡ ಆಸ್ಪತ್ರೆಯಾಗಿದ್ದು, ಈವರೆಗೂ 40 ಓಮಿಕ್ರಾನ್ ಪ್ರಕರಣ ವರದಿಯಾಗಿದೆ. ಈ ಪೈಕಿ 19 ರೋಗಿಗಳು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಓಮಿಕ್ರಾನ್ ರೋಗಿಗಳಿಗೆ ಇಲ್ಲಿಯವರೆಗೂ ಮಲ್ಟಿ ವಿಟಮಿನ್ಸ್ ಮತ್ತು ಪ್ಯಾರಾಸಿಟಮಾಲ್ ಔಷಧ ಮಾತ್ರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿರುವ ಸುಮಾರು 90 ರೋಗಿಗಳಿಗೆ ಗಂಟಲು ಕೆರೆತ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವಿನಂತಹ ಸಣ್ಣ ಲಕ್ಷಣಗಳಿವೆ. ಈ ರೋಗಿಗಳಿಗೆ ಮಲ್ಟಿ ವಿಟಮಿನ್ಸ್, ಪ್ಯಾರಾಸಿಟಮಾಲ್ ಮಾತ್ರೆಗಳನ್ನು ಔಷಧವಾಗಿ ನೀಡಲಾಗುತ್ತಿದೆ. ಬೇರೆ ಯಾವುದೇ ಔಷಧಿಯನ್ನು ಅವರಿಗೆ ನೀಡಬೇಕು ಅನಿಸುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ವಾರಿಯರ್ಸ್ಗೆ 4 ತಿಂಗಳಿನಿಂದ ಸಿಕ್ಕಿಲ್ಲ ಸಂಬಳ
ಬಹುತೇಕ ರೋಗಿಗಳು ವಿದೇಶಗಳಿಂದ ಆಗಮಿಸಿದವರಾಗಿದ್ದು, ಏರ್ಪೋರ್ಟ್ನಲ್ಲಿ ಪರೀಕ್ಷಿಸಿದಾಗ ಕೋವಿಡ್ -19 ಪಾಸಿಟಿವ್ ಕಂಡುಬಂದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೆಹಲಿಯಲ್ಲಿ ಇಲ್ಲಿಯವರೆಗೂ 67 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, 23 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ