Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | 400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಮೋದಿ

Election News

400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಮೋದಿ

Public TV
Last updated: May 13, 2024 3:07 pm
Public TV
Share
3 Min Read
narendra modi
SHARE

– ಸಂವಿಧಾನ ಬದ್ಧವಾಗಿ ಮೀಸಲಾತಿ ನೀಡಲು ಸಿದ್ಧವಾಗಿದ್ದೇವೆ ಎಂದ ಪ್ರಧಾನಿ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ 400 ಸ್ಥಾನಗಳನ್ನು (400 Paar) ಗೆಲ್ಲುವ ಹಾದಿಯಲ್ಲಿದೆ. ಈ ಗುರಿಯು ಕೇವಲ ಘೋಷಣೆಯಾಗಿಲ್ಲ, ವಾಸ್ತವದಲ್ಲೂ ಇದು ನಿಜವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ವಿಶ್ವಾಸ ವ್ಯಕ್ತಪಡಿಸಿದರು.

पूरे बिहार और देश में बीजेपी-एनडीए के पक्ष में आंधी चल रही है। मुजफ्फरपुर में आशीर्वाद देने आए परिवारजनों का मैं बहुत आभारी हूं। https://t.co/H9oD482oSU

— Narendra Modi (@narendramodi) May 13, 2024

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮಹಿಳೆಯರು, ಯುವಜನರು ಮತ್ತು ಮೊದಲ ಬಾರಿಗೆ ಮತ ಚಲಾಯಿಸುವ ಮತದಾರರು (Voters) ನಿರ್ಣಾಯಕವಾಗಿ ಮತ್ತು ಧನಾತ್ಮಕವಾಗಿ ಮತದಾನ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: 1998: ಮತ್ತೆ ದಿಲ್ಲಿ ಗದ್ದುಗೆಯೇರಿದ ವಾಜಪೇಯಿ – ಕರ್ನಾಟಕದಲ್ಲಿ ಬಿಜೆಪಿ ಎರಡಂಕಿಗೆ ಜಿಗಿತ

ನಾನು ಮತದಾನದ ಕೇಂದ್ರದಲ್ಲಿ ಇಲ್ಲ, 140 ಕೋಟಿ ಜನರು ಅಲ್ಲಿದ್ದಾರೆ. ಮೊದಲ ಮೂರು ಹಂತಗಳಲ್ಲಿನ ಮತದಾನದಲ್ಲಿ ʻ400 ಪಾರ್ʼ ಎಂಬುದು ಕೇವಲ ಘೋಷಣೆಯಾಗಿರದೇ ವಾಸ್ತವವಾಗುತ್ತಿರುವುದನ್ನು ಸ್ಪಷ್ಟವಾಗಿ ನೋಡುತ್ತಿದ್ದೇನೆ. ಎನ್‌ಡಿಎಯಂತಹ (NDA Alliance) ಬಲಿಷ್ಠ ಸರ್ಕಾರವನ್ನು ಆಯ್ಕೆ ಮಾಡಲು ಜನರು ಬದ್ಧರಾಗಿದ್ದಾರೆ. ದೇಶದ ಭವಿಷ್ಯ ಭದ್ರಪಡಿಸಲು ಜನರು ಬಿಸಿಗಾಳಿಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ram lalla narendra modi puja 7

ಎನ್‌ಡಿಎ 400 ಸೀಟುಗಳನ್ನು ಗೆಲ್ಲುವುದಿಲ್ಲ ಎಂಬ ಪ್ರತಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ಅವರ ಮಹಾ ನಾಯಕರು ರಾಜ್ಯಸಭೆಗೆ ಹೋಗಿದ್ದಾರೆ, ಅವರ 2ನೇ ನಾಯಕ 2ನೇ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ ಎಂದು ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆ ಮತ್ತು ರಾಹುಲ್ ಗಾಂಧಿ (Rahul Gandhi) ಅಮೇಥಿಯಿಂದ ಸ್ಪರ್ಧಿಸದ ಉದಾಹರಣೆಗಳನ್ನು ಉಲ್ಲೇಖಿಸಿದರು. ಅವರಿಗೆ ಜನರ ಸೇವೆಯಲ್ಲಿ ಆಸಕ್ತಿ ಇಲ್ಲ, ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಆಸಕ್ತಿ ಹೊಂದಿದ್ದಾರೆ ಮತ್ತು ದೇಶದ ಬಗ್ಗೆ ಯೋಚಿಸುವುದಿಲ್ಲ ಎಂದು ಅವರು ಕುಟುಕಿದರು.

ಕಳೆದ 10 ವರ್ಷಗಳಲ್ಲಿ ಅವರು ಪ್ರಧಾನಿಯಾಗಿ ವಿಫಲರಾಗಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಮೋದಿ, ಪ್ರತಿಪಕ್ಷಗಳು ಚಾಯ್ವಾಲಾ ಮಗನನ್ನು ಪ್ರಧಾನಿಯಾಗಿ ನೋಡಲು ಸಾಧ್ಯವಿಲ್ಲ. ನಾನು 3ನೇ ಬಾರಿಗೆ ಗೆದ್ದರೆ ನಾನು ಅವರ ದಾಖಲೆಯನ್ನು ಮರೆಮಾಡುತ್ತೇನೆ ಎಂದು ಅವರು ಭಯಪಡುತ್ತಿದ್ದಾರೆ ಎಂದು ಹೇಳಿದರು.

ತಮ್ಮ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, ಇಂದು ದೇಶದಲ್ಲಿ 1.5-2.5 ಲಕ್ಷ ಸ್ಟಾರ್ಟ್‌ಅಪ್‌ಗಳಿವೆ ಮತ್ತು ಅವುಗಳಲ್ಲಿ ಹೆಚ್ಚಿನವು ಶ್ರೇಣಿ-2 ಮತ್ತು ಶ್ರೇಣಿ-3 ನಗರಗಳಲ್ಲಿವೆ. ಲಕ್ಷಗಟ್ಟಲೆ ಉದ್ಯೋಗಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. 1 ಸ್ಟಾರ್ಟಪ್ ಆರಂಭಿಸಲು ಸರಾಸರಿ 4-5 ಜನರಿಗೆ ಉದ್ಯೋಗ ಸಿಗುತ್ತದೆ. ಮುದ್ರಾ ಯೋಜನೆಯಡಿ ಸುಮಾರು 28 ಲಕ್ಷ ಕೋಟಿ ಫಲಾನುಭವಿಗಳಿಗೆ ಸಾಲ ನೀಡಲಾಗಿದೆ. ನಾವು ಈಗ 3 ಕೋಟಿ ಮಹಿಳೆಯರನ್ನ ಲಕ್‌ಪತಿ ದೀದಿಯರನ್ನಾಗಿ ಮಾಡಲು ಯೋಜಿಸುತ್ತಿದ್ದೇವೆ. 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ ಎಂದು ಸಾಧನೆಗಳನ್ನು ಹೇಳಿದರು.

ಹಿಂದಿನದ್ದಕ್ಕೆ ಹೋಲಿಸಿದ್ರೆ ದುಪ್ಪಟ್ಟು ಹೆದ್ದಾರಿಗಳು ಮತ್ತು ರೈಲು ಮಾರ್ಗಗಳು ನಿರ್ಮಾಣವಾಗಿವೆ. ಆದರೂ ಅವರು ಸುಳ್ಳುಗಳನ್ನೇ ಹರಡುತ್ತಿದ್ದಾರೆ. ವಾಸ್ತವವಾಗಿ, ಅವರು ರಾಜಕೀಯವಾಗಿ ನಿರುದ್ಯೋಗಿಗಳಾಗಿದ್ದಾರೆ. ಇಂದು, ಎಲ್‌ಇಡಿ ಬಲ್ಬ್‌ಗಳ ಕ್ರಾಂತಿಯಿಂದಾಗಿ ವಿದ್ಯುತ್ ಬಿಲ್‌ಗಳಲ್ಲಿನ ಸರಾಸರಿ ಒಟ್ಟು ಮೊತ್ತವು ಕಡಿಮೆಯಾಗಿದೆ. 5 ಲಕ್ಷ ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾರೆ. 80 ಕೋಟಿ ಜನರು ಉಚಿತ ಪಡಿತರವನ್ನು ಪಡೆದಿದ್ದಾರೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ: ಪ್ರೀತಂಗೌಡ

Mohan Yadav Takes Oath As Madhya Pradesh Chief Minister PM Narendra Modi On Stage 1

ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಕಟುವಾಗಿ ಟೀಕಿಸಿದ ಮೋದಿ, ಕಾಂಗ್ರೆಸ್‌ ಪಕ್ಷವು ತನ್ನ ಮತ ಬ್ಯಾಂಕ್‌ಗಾಗಿ ಯಾವುದೇ ಹಂತಕ್ಕೆ ಇಳಿಯಬಹುದು. ತೀರ್ಪು ಬಂದಾಗಿನಿಂದ ರಾಮ ಮಂದಿರದ ಬಗ್ಗೆ ಕಾಂಗ್ರೆಸ್‌ನ ನಿರೂಪಣೆ ಸ್ಪಷ್ಟವಾಗಿದೆ ಅವರು ರಾಮಲಲ್ಲಾನ ಮತ್ತೆ ಟೆಂಟ್‌ಗೆ ಕಳುಹಿಸಲು ಬಯಸುತ್ತಿದ್ದಾರೆ. ಅವರು ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಈ ಎಲ್ಲ ಕೆಲಸಗಳನ್ನು ಮಾಡುತ್ತಾರೆ ಎನ್ನುವುದು ನನಗೆ ಆಶ್ಚರ್ಯ ತಂದಿದೆ ಎಂದರು.

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಬದ್ಧವಾಗಿದೆಯೇ ಹೊರತು ಧರ್ಮದ ಆಧಾರದ ಮೇಲೆ ಅಲ್ಲ ಎಂದು ಅವರು ಹೇಳಿದರು. ಧರ್ಮಾಧಾರಿತ ಮೀಸಲಾತಿಗೆ ನಾವು ಎಂದಿಗೂ ಅವಕಾಶ ನೀಡುವುದಿಲ್ಲ, ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ರಚನಾ ಸಭೆಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾ ನೀಡಬೇಕೆಂದು ಕರೆ ನೀಡಿತು, ಅದಕ್ಕೆ ನಾವು ಬದ್ಧರಾಗಿದ್ದೇವೆ, ನಾವು ಸಂವಿಧಾನ ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:400 PaarbjpndaPM Modiಎನ್‍ಡಿಎನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Muslim leaders recommend four names for Davangere South Bypolls
Davanagere

ದಾವಣಗೆರೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಿದ ಮುಸ್ಲಿಮ್‌ ನಾಯಕರು

Public TV
By Public TV
2 hours ago
NS Bosaraju
Bellary

ಟಿಬಿ ಡ್ಯಾಂಗೆ ಸಚಿವ ಬೋಸರಾಜು ಭೇಟಿ – ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ವೀಕ್ಷಣೆ

Public TV
By Public TV
2 hours ago
Bus hits woman at Lakshmeshwara bus stand woman dies
Districts

ಲಕ್ಷ್ಮೇಶ್ವರ ಬಸ್‌ ನಿಲ್ದಾಣದಲ್ಲಿ ಬಸ್ ಡಿಕ್ಕಿ – ಚಿಕಿತ್ಸೆ ಫಲಿಸದೇ ಮಹಿಳೆ‌ ಸಾವು

Public TV
By Public TV
3 hours ago
Sharanu Salagar
Bidar

ಮದ್ಯ ಮಾರಾಟ ಬಂದ್ ಮಾಡುವಂತೆ ಶರಣು ಸಲಗರ್ ಮುಂದೆ ಮಹಿಳೆಯರ ಕಣ್ಣೀರು

Public TV
By Public TV
3 hours ago
Rass Laffan
Latest

ವಿಶ್ವದ ಅತಿ ದೊಡ್ಡ LNG ಘಟಕ ದುರಸ್ತಿಗೆ 5 ವರ್ಷ ಬೇಕು!

Public TV
By Public TV
3 hours ago
KPSC
Bengaluru City

KPSC ಅಕ್ರಮ ಆರೋಪ – ಪರೀಕ್ಷಾ ನಿಯಂತ್ರಕ ಎತ್ತಂಗಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?