Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಮೋದಿ

Public TV
Last updated: May 13, 2024 3:07 pm
Public TV
Share
3 Min Read
narendra modi
SHARE

– ಸಂವಿಧಾನ ಬದ್ಧವಾಗಿ ಮೀಸಲಾತಿ ನೀಡಲು ಸಿದ್ಧವಾಗಿದ್ದೇವೆ ಎಂದ ಪ್ರಧಾನಿ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ 400 ಸ್ಥಾನಗಳನ್ನು (400 Paar) ಗೆಲ್ಲುವ ಹಾದಿಯಲ್ಲಿದೆ. ಈ ಗುರಿಯು ಕೇವಲ ಘೋಷಣೆಯಾಗಿಲ್ಲ, ವಾಸ್ತವದಲ್ಲೂ ಇದು ನಿಜವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ವಿಶ್ವಾಸ ವ್ಯಕ್ತಪಡಿಸಿದರು.

पूरे बिहार और देश में बीजेपी-एनडीए के पक्ष में आंधी चल रही है। मुजफ्फरपुर में आशीर्वाद देने आए परिवारजनों का मैं बहुत आभारी हूं। https://t.co/H9oD482oSU

— Narendra Modi (@narendramodi) May 13, 2024

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮಹಿಳೆಯರು, ಯುವಜನರು ಮತ್ತು ಮೊದಲ ಬಾರಿಗೆ ಮತ ಚಲಾಯಿಸುವ ಮತದಾರರು (Voters) ನಿರ್ಣಾಯಕವಾಗಿ ಮತ್ತು ಧನಾತ್ಮಕವಾಗಿ ಮತದಾನ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: 1998: ಮತ್ತೆ ದಿಲ್ಲಿ ಗದ್ದುಗೆಯೇರಿದ ವಾಜಪೇಯಿ – ಕರ್ನಾಟಕದಲ್ಲಿ ಬಿಜೆಪಿ ಎರಡಂಕಿಗೆ ಜಿಗಿತ

ನಾನು ಮತದಾನದ ಕೇಂದ್ರದಲ್ಲಿ ಇಲ್ಲ, 140 ಕೋಟಿ ಜನರು ಅಲ್ಲಿದ್ದಾರೆ. ಮೊದಲ ಮೂರು ಹಂತಗಳಲ್ಲಿನ ಮತದಾನದಲ್ಲಿ ʻ400 ಪಾರ್ʼ ಎಂಬುದು ಕೇವಲ ಘೋಷಣೆಯಾಗಿರದೇ ವಾಸ್ತವವಾಗುತ್ತಿರುವುದನ್ನು ಸ್ಪಷ್ಟವಾಗಿ ನೋಡುತ್ತಿದ್ದೇನೆ. ಎನ್‌ಡಿಎಯಂತಹ (NDA Alliance) ಬಲಿಷ್ಠ ಸರ್ಕಾರವನ್ನು ಆಯ್ಕೆ ಮಾಡಲು ಜನರು ಬದ್ಧರಾಗಿದ್ದಾರೆ. ದೇಶದ ಭವಿಷ್ಯ ಭದ್ರಪಡಿಸಲು ಜನರು ಬಿಸಿಗಾಳಿಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ram lalla narendra modi puja 7

ಎನ್‌ಡಿಎ 400 ಸೀಟುಗಳನ್ನು ಗೆಲ್ಲುವುದಿಲ್ಲ ಎಂಬ ಪ್ರತಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ಅವರ ಮಹಾ ನಾಯಕರು ರಾಜ್ಯಸಭೆಗೆ ಹೋಗಿದ್ದಾರೆ, ಅವರ 2ನೇ ನಾಯಕ 2ನೇ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ ಎಂದು ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆ ಮತ್ತು ರಾಹುಲ್ ಗಾಂಧಿ (Rahul Gandhi) ಅಮೇಥಿಯಿಂದ ಸ್ಪರ್ಧಿಸದ ಉದಾಹರಣೆಗಳನ್ನು ಉಲ್ಲೇಖಿಸಿದರು. ಅವರಿಗೆ ಜನರ ಸೇವೆಯಲ್ಲಿ ಆಸಕ್ತಿ ಇಲ್ಲ, ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಆಸಕ್ತಿ ಹೊಂದಿದ್ದಾರೆ ಮತ್ತು ದೇಶದ ಬಗ್ಗೆ ಯೋಚಿಸುವುದಿಲ್ಲ ಎಂದು ಅವರು ಕುಟುಕಿದರು.

ಕಳೆದ 10 ವರ್ಷಗಳಲ್ಲಿ ಅವರು ಪ್ರಧಾನಿಯಾಗಿ ವಿಫಲರಾಗಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಮೋದಿ, ಪ್ರತಿಪಕ್ಷಗಳು ಚಾಯ್ವಾಲಾ ಮಗನನ್ನು ಪ್ರಧಾನಿಯಾಗಿ ನೋಡಲು ಸಾಧ್ಯವಿಲ್ಲ. ನಾನು 3ನೇ ಬಾರಿಗೆ ಗೆದ್ದರೆ ನಾನು ಅವರ ದಾಖಲೆಯನ್ನು ಮರೆಮಾಡುತ್ತೇನೆ ಎಂದು ಅವರು ಭಯಪಡುತ್ತಿದ್ದಾರೆ ಎಂದು ಹೇಳಿದರು.

ತಮ್ಮ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, ಇಂದು ದೇಶದಲ್ಲಿ 1.5-2.5 ಲಕ್ಷ ಸ್ಟಾರ್ಟ್‌ಅಪ್‌ಗಳಿವೆ ಮತ್ತು ಅವುಗಳಲ್ಲಿ ಹೆಚ್ಚಿನವು ಶ್ರೇಣಿ-2 ಮತ್ತು ಶ್ರೇಣಿ-3 ನಗರಗಳಲ್ಲಿವೆ. ಲಕ್ಷಗಟ್ಟಲೆ ಉದ್ಯೋಗಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. 1 ಸ್ಟಾರ್ಟಪ್ ಆರಂಭಿಸಲು ಸರಾಸರಿ 4-5 ಜನರಿಗೆ ಉದ್ಯೋಗ ಸಿಗುತ್ತದೆ. ಮುದ್ರಾ ಯೋಜನೆಯಡಿ ಸುಮಾರು 28 ಲಕ್ಷ ಕೋಟಿ ಫಲಾನುಭವಿಗಳಿಗೆ ಸಾಲ ನೀಡಲಾಗಿದೆ. ನಾವು ಈಗ 3 ಕೋಟಿ ಮಹಿಳೆಯರನ್ನ ಲಕ್‌ಪತಿ ದೀದಿಯರನ್ನಾಗಿ ಮಾಡಲು ಯೋಜಿಸುತ್ತಿದ್ದೇವೆ. 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ ಎಂದು ಸಾಧನೆಗಳನ್ನು ಹೇಳಿದರು.

ಹಿಂದಿನದ್ದಕ್ಕೆ ಹೋಲಿಸಿದ್ರೆ ದುಪ್ಪಟ್ಟು ಹೆದ್ದಾರಿಗಳು ಮತ್ತು ರೈಲು ಮಾರ್ಗಗಳು ನಿರ್ಮಾಣವಾಗಿವೆ. ಆದರೂ ಅವರು ಸುಳ್ಳುಗಳನ್ನೇ ಹರಡುತ್ತಿದ್ದಾರೆ. ವಾಸ್ತವವಾಗಿ, ಅವರು ರಾಜಕೀಯವಾಗಿ ನಿರುದ್ಯೋಗಿಗಳಾಗಿದ್ದಾರೆ. ಇಂದು, ಎಲ್‌ಇಡಿ ಬಲ್ಬ್‌ಗಳ ಕ್ರಾಂತಿಯಿಂದಾಗಿ ವಿದ್ಯುತ್ ಬಿಲ್‌ಗಳಲ್ಲಿನ ಸರಾಸರಿ ಒಟ್ಟು ಮೊತ್ತವು ಕಡಿಮೆಯಾಗಿದೆ. 5 ಲಕ್ಷ ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾರೆ. 80 ಕೋಟಿ ಜನರು ಉಚಿತ ಪಡಿತರವನ್ನು ಪಡೆದಿದ್ದಾರೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ: ಪ್ರೀತಂಗೌಡ

Mohan Yadav Takes Oath As Madhya Pradesh Chief Minister PM Narendra Modi On Stage 1

ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಕಟುವಾಗಿ ಟೀಕಿಸಿದ ಮೋದಿ, ಕಾಂಗ್ರೆಸ್‌ ಪಕ್ಷವು ತನ್ನ ಮತ ಬ್ಯಾಂಕ್‌ಗಾಗಿ ಯಾವುದೇ ಹಂತಕ್ಕೆ ಇಳಿಯಬಹುದು. ತೀರ್ಪು ಬಂದಾಗಿನಿಂದ ರಾಮ ಮಂದಿರದ ಬಗ್ಗೆ ಕಾಂಗ್ರೆಸ್‌ನ ನಿರೂಪಣೆ ಸ್ಪಷ್ಟವಾಗಿದೆ ಅವರು ರಾಮಲಲ್ಲಾನ ಮತ್ತೆ ಟೆಂಟ್‌ಗೆ ಕಳುಹಿಸಲು ಬಯಸುತ್ತಿದ್ದಾರೆ. ಅವರು ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಈ ಎಲ್ಲ ಕೆಲಸಗಳನ್ನು ಮಾಡುತ್ತಾರೆ ಎನ್ನುವುದು ನನಗೆ ಆಶ್ಚರ್ಯ ತಂದಿದೆ ಎಂದರು.

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಬದ್ಧವಾಗಿದೆಯೇ ಹೊರತು ಧರ್ಮದ ಆಧಾರದ ಮೇಲೆ ಅಲ್ಲ ಎಂದು ಅವರು ಹೇಳಿದರು. ಧರ್ಮಾಧಾರಿತ ಮೀಸಲಾತಿಗೆ ನಾವು ಎಂದಿಗೂ ಅವಕಾಶ ನೀಡುವುದಿಲ್ಲ, ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ರಚನಾ ಸಭೆಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾ ನೀಡಬೇಕೆಂದು ಕರೆ ನೀಡಿತು, ಅದಕ್ಕೆ ನಾವು ಬದ್ಧರಾಗಿದ್ದೇವೆ, ನಾವು ಸಂವಿಧಾನ ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:400 PaarbjpndaPM Modiಎನ್‍ಡಿಎನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

Actress Sapthami Gowda photoshoot in a simple look wearing a salwar
Cinema

ಬೋಲ್ಡ್ ಫೋಟೋಗೆ ಬ್ಯಾಡ್ ಕಾಮೆಂಟ್, ಗೌರಮ್ಮನಾದ ಸಪ್ತಮಿ!

Public TV
By Public TV
2 minutes ago
Niveditha Gowda
Cinema

ಗಾಳಿಯಲ್ಲಿ ಬಟ್ಟೆ ಹಾರಿಸುವ ರೀಲ್ಸ್‌ಗೆ ನಿವಿ ಅಂಬಾಸಿಡರ್

Public TV
By Public TV
19 minutes ago
VTU Engineering Exam Suchita Madiwala first rank and gold medal
Dakshina Kannada

ವಿಟಿಯು ಇಂಜಿನಿಯರಿಂಗ್‌ ಪರೀಕ್ಷೆ – ಸುಚಿತಾ ಮಡಿವಾಳಗೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ

Public TV
By Public TV
31 minutes ago
Shalini Rajneesh Ravi Kumar
Bengaluru City

ಎಂಎಲ್‌ಸಿ ರವಿಕುಮಾರ್‌ಗೆ ʻಹೈʼ ರಿಲೀಫ್‌ – ಜು.8ರ ವರೆಗೆ ಬಂಧಿಸದಂತೆ ಆದೇಶ

Public TV
By Public TV
34 minutes ago
KSRTC round off order cancelled after heavy criticism
Bengaluru City

46 ರೂ. ಆಗಿದ್ರೂ 50 ರೂ. ಟಿಕೆಟ್‌ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು

Public TV
By Public TV
1 hour ago
Chikkaballapura Accident
Chikkaballapur

ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ – ಲಾರಿ ಮಾಲೀಕ ಸಾವು, ಚಾಲಕ ಗಂಭೀರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?