41ನೇ ಜಿಎಸ್‍ಟಿ ಕೌನ್ಸಿಲ್ ಸಭೆ – ಹೆಚ್ಚಿನ ಪರಿಹಾರಕ್ಕೆ ರಾಜ್ಯ ಸರ್ಕಾರಗಳ ಬೇಡಿಕೆ

Public TV
1 Min Read
NIRAMALA

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ 41ನೇ ಜಿಎಸ್‍ಟಿ ಕೌನ್ಸಿಲ್ ಸಭೆ ಆರಂಭವಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯುತ್ತಿದ್ದು, ಕೊರೊನಾದಿಂದ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯಗಳಿಗೆ ಇದು ಅತ್ಯಂತ ಮಹತ್ವದ ಸಭೆಯಾಗಿದೆ.

ಸಭೆಯಲ್ಲಿ ಹಣಕಾಸು ರಾಜ್ಯ ಖಾತೆ ಸಚಿವ ಅನುರಾಗ್ ಠಾಕೂರ್, ಹಣಕಾಸು ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಭಾಗಿಯಾಗಲಿದ್ದು ರಾಜ್ಯವಾರು ಜಿಎಸ್‍ಟಿ ಪರಿಹಾರ ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ.

ಸಭೆಯಲ್ಲಿ ಜಿಎಸ್‍ಟಿ ನಷ್ಟ ಪರಿಹಾರ ಹಾಗೂ ಸೆಸ್ ನೀಡುವ ವಿಚಾರ ಬಗ್ಗೆ ಸಮಾಲೋಚನೆ ನಡೆಯಲಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಗಳು ಕೇಂದ್ರದಿಂದ ಹೆಚ್ಚಿನ ಪರಿಹಾರ ಕೇಳುತ್ತಿವೆ. ಕೇಂದ್ರ ಸರ್ಕಾರವೂ ಆದಾಯ ಕೊರತೆ ಎದುರಿಸುತ್ತಿದ್ದು ಇಂದಿನ ಸಭೆಯಲ್ಲಿ ಮುಂದಿನ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಮಧ್ಯಾಹ್ನ ಮೂರು ಗಂಟೆಗೆ ಸಭೆ ಮಾಹಿತಿಯನ್ನು ನಿರ್ಮಲಾ ಸೀತಾರಾಮನ್ ಹಂಚಿಕೊಳ್ಳಲಿದ್ದಾರೆ.

Nirmala Sitharaman 2

Share This Article
Leave a Comment

Leave a Reply

Your email address will not be published. Required fields are marked *