ಉತ್ತರ ಭಾರತದ ಎಂಟು ರಾಜ್ಯಗಳಲ್ಲಿ ಬಿಸಿ ಬಿರುಗಾಳಿ ಸಹಿತ ಮಳೆ – 41 ಸಾವು

Public TV
1 Min Read
storm 4

ನವದೆಹಲಿ: ಮಂಗಳವಾರ ಉತ್ತರ ಭಾರತದ ಎಂಟು ರಾಜ್ಯಗಳಲ್ಲಿ ಹವಾಮಾನ ಬದಲಾಗಿದ್ದು, ಬಿರುಗಾಳಿಗೆ 41 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ನವದೆಹಲಿಯಲ್ಲಿ ಬಿರುಗಾಳಿ ಜೊತೆ ಮಳೆರಾಯ ಅಬ್ಬರಿಸಿದ್ದಾನೆ. ಬುಧವಾರ ಮತ್ತು ಗುರುವಾರ ಸಹ ಇದೇ ರೀತಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

storm 2

ಮಾಧ್ಯಮಗಳ ಜೊತೆ ಮಾತನಾಡಿರುವ ಭಾರತೀಯ ಹವಾಮಾನ ವಿಭಾಗದ ನಿರ್ದೇಶಕ ಕೆ.ಜೆ.ರಮೇಶ್, ಕಳೆದ ಮೂರ್ನಾಲ್ಕು ದಿನಗಳಿಂದ ಪಾಕಿಸ್ತಾನದಿಂದ ಭಾರತದ ಪಶ್ಚಿಮ ಭಾಗ ಮಾರ್ಗವಾಗಿ ಬಿಸಿ ಗಾಳಿ ಬೀಸುತ್ತಿದೆ. ಇದು ಭಾರತದ ಮಧ್ಯಭಾಗದಿಂದ ಪಶ್ಚಿಮ ಬಂಗಾಳದ ಉತ್ತರ ಭಾಗದವರೆಗೂ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ. ಗುಡುಗು, ಸಿಡಿಲು ಸಹಿತ ಬುಧವಾರ ಮತ್ತು ಗುರುವಾರ ಮಳೆ ಆಗಲಿದೆ. ಬಿಸಿಗಾಳಿ ಜೊತೆಯಲ್ಲಿಯೇ ಮಳೆ ಆಗಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡಲೇ ರಕ್ಷಣಾ ಕಾರ್ಯಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಅಡಿಯಲ್ಲಿ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ನೀಡಬೇಕೆಂದು ಆದೇಶಿಸಿದ್ದಾರೆ.

storm 3

ರಾಜಸ್ಥಾನ 11, ಮಧ್ಯ ಪ್ರದೇಶ 16, ರಾಜಸ್ಥಾನ 7, ಪಂಜಾಬ್ 2, ಹರಿಯಾಣ 01 ಮತ್ತು ಜಾರ್ಖಂಡ್, ಮಹಾರಾಷ್ಟ್ರ, ಉತ್ತರ ಪ್ರದೇಶ, ಹಿಮಾಚಲದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *