ಬೆಂಗಳೂರು: ಆಸ್ತಿ ವಿವರ ಸಲ್ಲಿಸಲು ಐಪಿಎಸ್ ಅಧಿಕಾರಿಗಳು ಜನಪ್ರತಿನಿಧಿಗಳಂತೆ ಮೊಂಡಾಟ ಮಾಡುತ್ತಿದ್ದಾರೆ. ಇದುವರೆಗೂ ರಾಜ್ಯದ ಬರೋಬ್ಬರಿ 45 ಐಪಿಎಸ್ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸಿಲ್ಲ.
2018ರ ಆಸ್ತಿ ವಿವರ ಈ ವರ್ಷ ಜನವರಿ ಅಂತ್ಯದೊಳಗೆ ಸಲ್ಲಿಸಬೇಕಾಗಿತ್ತು. ಆದರೆ ಇದುವರೆಗೂ 45 ಐಪಿಎಸ್ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸಿಲ್ಲ.
ಐಪಿಎಸ್ ಅಧಿಕಾರಿಗಳ ಮೊಂಡಾಟಕ್ಕೆ ಬೇಸತ್ತು ರಾಜ್ಯ ಒಳಡಾಳಿತ ಇಲಾಖೆಗಳ ಕಾರ್ಯದರ್ಶಿ ರಜನೀಶ್ ಗೋಯಲ್ ಡಿಜಿ ಐಜಿಪಿಗೆ ಪತ್ರ ಬರೆದಿದ್ದಾರೆ. ಪ್ರತಿ ವರ್ಷ ಐಪಿಎಸ್ ಅಧಿಕಾರಿಗಳು ತಮ್ಮ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸಬೇಕು ಎನ್ನುವ ನಿಯಮವಿದೆ.
ಆಸ್ತಿ ವಿವರ ಸಲ್ಲಿಸಲು ಆನ್ ಲೈನ್ ವ್ಯವಸ್ಥೆ ಮಾಡಿದರೂ ಸಹ ಅಧಿಕಾರಿಗಳ ನಿರ್ಲಕ್ಷ್ಯ ವಹಿಸುತ್ತಿದಾರೆ. ಚಿರಾಸ್ತಿ ಹಾಗೂ ಸ್ಥಿರಾಸ್ತಿ ವಿವರ ಸಲ್ಲಿಕೆ ಮಾಡಲು ಐಪಿಎಸ್ ಅಧಿಕಾರಿಗಳ ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಡಿಜಿಪಿಗೆ ಪತ್ರ ಬರೆದು ತ್ವರಿತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.