5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

Public TV
1 Min Read
mahadeshwara

ಚಾಮರಾಜನಗರ: ಕೊರೊನಾ ಹಿನ್ನೆಲೆ ಈ ಬಾರಿ ಮಲೆಮಹದೇಶ್ವರ ಬೆಟ್ಟಕ್ಕೆ 5 ದಿನಗಳ ಕಾಲ ಪ್ರವೇಶವನ್ನು ನಿಷೇಧಿಸಲಾಗಿದೆ.

ಗುರುವಾರ ಶಿವರಾತ್ರಿ ಹಬ್ಬವಿರುವುದರಿಂದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟಕ್ಕೆ ಮಾದಪ್ಪನ ದರ್ಶನ ಪಡೆಯಲು ಜನಸಾಗರವೇ ಹರಿದು ಬರುತ್ತದೆ. ಹೀಗಾಗಿ ಮಾರ್ಚ್ 9 ರಿಂದ 14 ರವರೆಗೆ ಶಿವರಾತ್ರಿ ಜಾತ್ರೆಗೆ ನಿಷೇಧ ಹೇರಲಾಗಿದೆ.

mahadeshwara 2

ಭಾನುವಾರ ಚಿನ್ನದ ರಥದ ಸೇವೆ ಮಾಡಲು ಬೆಟ್ಟದಲ್ಲಿ ಮಾದಪ್ಪನ ಭಕ್ತರು ಮುಗಿ ಬಿದ್ದಿದ್ದರು. ಅಲ್ಲದೆ ನಿನ್ನೆ ಒಂದೇ ದಿನ ವಿವಿಧ ಸೇವೆಗಳಿಂದ ದೇವಾಲಯಕ್ಕೆ 9,22,024 ರೂ. ಹಣ ಸಂಗ್ರಹವಾಗಿದೆ. ಕೊರೊನಾ ಕಾರಣದಿಂದ ಈ ಬಾರಿಯ ಮಹಾಶಿವರಾತ್ರಿ ಹಬ್ಬವನ್ನು ಸರಳ ಹಾಗೂ ಸಂಪ್ರದಾಯಕವಾಗಿ ಆಚರಣೆ ಮಾಡಲಾಗುತ್ತಿದ್ದು, ಐದು ದಿನಗಳ ಕಾಲ ಬೆಟ್ಟದಲ್ಲಿ ವಾಸ ಮಾಡುವ ನಿವಾಸಿಗಳಿಗೆ ಮಾತ್ರ ಮಾದಪ್ಪನ ದರ್ಶನ ದೊರೆಯಲಿದೆ.

recept

ಹೊರಗಿನಿಂದ ಬೆಟ್ಟಕ್ಕೆ ಬರುವ ಭಕ್ತರಿಗೂ, ಕಾಲ್ನಡಿಗೆಯಿಂದ ಬರುವ ಭಕ್ತರಿಗೂ ಬೆಟ್ಟಕ್ಕೆ ಪ್ರವೇಶ ನಿಷೇಧಸಿಲಾಗಿದೆ ಎಂಬುವುದರ ಬಗ್ಗೆ ಈಗಾಗಲೇ ಜಿಲ್ಲಾಡಳಿತ, ಪ್ರಾಧಿಕಾರ ಆದೇಶ ಹೊರಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *