ರಾಯಚೂರು: ನಗರದ ಬಸವೇಶ್ವರ ವೃತ್ತದ ಬಳಿಯ ಮಂಜುನಾಥ್ ವೈನ್ಸ್ ನಲ್ಲಿ ಕಳ್ಳತನವಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮದ್ಯದಂಗಡಿಯ ಹಿಂದಿನ ಬಾಗಿಲ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಅಂದಾಜು ಐದು ಲಕ್ಷ ಮೌಲ್ಯದ ಮದ್ಯವನ್ನ ಕಳ್ಳರು ದೋಚಿದ್ದಾರೆ. ಅಗ್ಗದ ಬೆಲೆಯ ಮದ್ಯಕ್ಕಿಂತ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನ ಹೆಚ್ಚು ಕಳ್ಳತನ ಮಾಡಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿದ್ದ ವೇಳೆ ಕಳ್ಳತನ ನಡೆದಿರಬಹುದು ಅಂತ ಅಂಗಡಿ ಮಾಲೀಕರು ಹೇಳಿದ್ದಾರೆ. ಇಂದು ಬೆಳಗ್ಗೆ ಅಂಗಡಿ ತೆರೆಯಲು ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನ ಕಳ್ಳತನ ಮಾಡಲಾಗಿದೆ. ಅಂಗಡಿಯಲ್ಲಿನ ಸಿಸಿ ಕ್ಯಾಮರಾಗಳನ್ನೂ ಜಖಂಗೊಳಿಸಲಾಗಿದೆ.
ಘಟನೆ ಸಂಬಂಧ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.