Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್

Public TV
Last updated: November 19, 2020 12:43 pm
Public TV
Share
3 Min Read
ASHWATH
SHARE

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್ ಸಮ್ಮಿಟ್ (ಬಿಟಿಎಸ್)-2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‍ವಷ್ಟು ಡಿಜಿಟಲ್ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದರು.

ಡಿಜಿಟಲ್ ಆರ್ಥಿಕತೆ ಬಲಪಡಿಸುವ ನಮ್ಮ ಯೋಜನೆಗಳು ಕರ್ನಾಟಕವನ್ನು 300 ಬಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಹೊಂದಿದ ರಾಜ್ಯವನ್ನಾಗಿ ಮಾಡಲಿದೆ.

ಇದು #AatmaNirbharBharat ನಿರ್ಮಾಣಕ್ಕೆ ಹಾಗೂ 1 ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಹೊಂದಿದ ದೇಶವನ್ನಾಗಿ ಮಾಡುವ ಪ್ರಧಾನಿ @narendramodi ಯವರ ಗುರಿಗೆ ಪೂರಕ.#BTS2020 #NextIsNow pic.twitter.com/VyC57ukmGF

— Dr. Ashwathnarayan C. N. (@drashwathcn) November 19, 2020

ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್ ಡಿಜಿಟಲ್ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಉಪಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದರು.

* ಡಿಜಿಟಲ್ ಆರ್ಥಿಕತೆಯ ಗುರಿ ತಲುಪಲು ರಾಜ್ಯವು ಈಗಾಗಲೇ ಡಿಜಿಟಲ್ ಎಕಾನಮಿ ಮಿಷನ್ ಸ್ಥಾಪನೆ ಮಾಡಿ ಕಾರ್ಯಪ್ರವೃತ್ತವಾಗಿದೆ. ತಂತ್ರಜ್ಞಾನದ ಮೂಲಕ ಆರ್ಥಿಕತೆಗೆ ವೇಗ ನೀಡುವುದು ಈ ಮಿಷನ್ ಉದ್ದೇಶವಾಗಿದೆ.

5 ವರ್ಷಗಳಲ್ಲಿ 150 ಬಿಲಿಯನ್ ಡಾಲರ್ ಮೌಲ್ಯದ ಐಟಿ ರಫ್ತನ್ನು ಸಾಧಿಸಲು, ನಮ್ಮ ಡಿಜಿಟಲ್ ಎಕಾನಮಿಯ ಪ್ರಗತಿಗಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪ್ರಾರಂಭಿಸಲಾಗಿದೆ.@investindia ಮಾದರಿಯಲ್ಲಿ ನಮ್ಮ ತಂತ್ರಜ್ಞಾನ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರಗೊಳಿಸಲಿದೆ ಹಾಗೂ ಕರ್ನಾಟಕದ ಬ್ರಾಂಡ್ ಈಕ್ವಿಟಿ ವೃದ್ಧಿಸಲಿದೆ.#BTS2020 https://t.co/ZQnKj8d6pt

— Dr. Ashwathnarayan C. N. (@drashwathcn) November 19, 2020

* ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಇನ್‍ವೆಸ್ಟ್ ಇಂಡಿಯಾ ಮೂಲಕ ಜಾಗತಿಕ ಸಂಪರ್ಕಗಳನ್ನು ಕರ್ನಾಟಕದ ಜೊತೆ ಅನುಸಂಧಾನಗೊಳಿಸುತ್ತಿದ್ದು, ಈ ಉಪಕ್ರಮದಿಂದ ಕರ್ನಾಟಕದ ತಂತ್ರಜ್ಞಾನ ಉದ್ಯಮ ಮತ್ತು ರಾಜ್ಯದ ಬ್ರಾಂಡ್ ಈಕ್ವಿಟಿಯನ್ನು ಉತ್ತಮಗೊಳಿಸುತ್ತಿದೆ. ಈ ಮೂಲಕ ಮುಂದಿನ ಮೈಲುಗಲ್ಲು ಸಾಧಿಸಲಾಗುವುದು. ಇದಕ್ಕೆ ಪೂರಕವಾಗಿ ಹೊಸ ತಲೆಮಾರಿನ ನವೋದ್ಯಮ, ಐಟಿ ಬಿಟಿ ಜತೆಗೆ ಎಲೆಕ್ಟ್ರಾನಿಕ್ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.

* ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ ಅತ್ಯಂತ ದೂರದೃಷ್ಟಿಯುಳ್ಳ ಹಾಗೂ ಮುಂದಿನ ಐದು ವರ್ಷಗಳಲ್ಲಿ ಪರಿಣಾಮಕಾರಿ ಫಲಿತಾಂಶವನ್ನು ನೀಡಬಲ್ಲ ಐಟಿ ನೀತಿ-2020-25 ಅನ್ನು ರೂಪಿಸಿದ್ದು, ರಾಜ್ಯದ ಪ್ರತಿಮೂಲೆಗೂ ಅತ್ಯುತ್ತಮ ಕನೆಕ್ಟಿವಿಟಿ ಮಾಡಿ ಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಉಪಕ್ರಮಿಸಲಾಗಿದೆ. ಈಗಾಗಲೇ ಲಭ್ಯವಿರುವ 4ಜಿ ಸೇವೆಯ ಜತೆಗೆ, 5ಜಿ ಸೇವೆಯನ್ನೂ ಪ್ರತಿ ಮೂಲೆಗೂ ವಿಸ್ತರಿಸುವುದು, ಆ ಮೂಲಕ ಡಿಜಿಟಲ್ ಆರ್ಥಿಕತೆ ಗುರಿಗೆ ಶಕ್ತಿ ತುಂಬುವುದು ಸರ್ಕಾರದ ಉದ್ದೇಶವಾಗಿದೆ.

AI, ರೋಬೋಟಿಕ್ಸ್ ಮುಂತಾದ ನೂತನ ತಂತ್ರಜ್ಞಾನಗಳ ಅಭಿವೃದ್ಧಿಗೆ ನೆರವಾಗುವಂತೆ @iiscbangalore ಕ್ಯಾಂಪಸ್ ನಲ್ಲಿ ART Park ಸ್ಥಾಪಿಸಲು ಕರ್ನಾಟಕ ಮುಂದಾಗಿದೆ.

ದೊಡ್ಡ ಮಟ್ಟದ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು, ಪ್ರಧಾನಿ @narendramodi ಯವರ @_DigitalIndia ಯೋಜನೆಗಳನ್ನು ದೇಶೀಯವಾಗಿ ಅನುಷ್ಠಾನಗೊಳಿಸಲು ಇದು ನೆರವಾಗಲಿದೆ.#BTS2020

— Dr. Ashwathnarayan C. N. (@drashwathcn) November 19, 2020

* ಬೆಂಗಳೂರಿಗೆ ಅದ್ಭುತವಾದ ತಂತ್ರಜ್ಞಾನ ಪಯಣದ ಟ್ರ್ಯಾಕ್ ಇದ್ದು, ಈ ವೇದಿಕೆಯ ಮೂಲಕ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಆರಂಭಗೊಳ್ಳುತ್ತಿದೆ. ಸುಮಾರು 5500 ಡ್ರೈವಿಂಗ್ ಟೆಕ್ನಾಲಜಿ ಕಂಪನಿಗಳು ರಾಜ್ಯದಲ್ಲಿದ್ದು, ಅವೆಲ್ಲವೂ ಜಾಗತಿಕ ಮಟ್ಟಕ್ಕೆ ಸರಿಸಾಟಿಯಾಗಿ ಕೆಲಸ ಮಾಡುತ್ತಿವೆ.

* ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸಲಾಗಿದೆ. ಅಂತಹ ವಿಪರೀತ ಸಂರ್ಭದಲ್ಲೂ ರಾಜ್ಯ ಸರ್ಕಾರವು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಹೀಗಾಗಿ ಐಟಿ ಬಿಟಿ ಕ್ಷೇತ್ರದಲ್ಲಿ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆ ತರುವಲ್ಲಿ ನಾವು ಯಶಸ್ವಿಯಾಗಿದ್ದೇವೆ.

ನಾನು ನಿಮಗಾಗಿ ಇಲ್ಲಿ ಸದಾ ಇದ್ದೇನೆ.
ನಾನು ನಿಮಗಾಗಿ ಸದಾ ಕೆಲಸ ಮಾಡುವೆ, ನಿಮ್ಮನ್ನು ಆಲಿಸುವೆ.
ಕರ್ನಾಟಕದ ಎಲ್ಲಾ ವ್ಯಕ್ತಿಗಳು,ಉದ್ಯಮಗಳು ಜಾಗತಿಕ ಮಟ್ಟಿನಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು ಎಂಬುದು ನಮ್ಮ ಆಶಯ.

Local ನಿಂದ Global ಹೋಗಲು, ಜಾಗತಿಕ ಮಟ್ಟದ ಅವಕಾಶಗಳನ್ನು ನಿಮ್ಮತ್ತ ಕರೆತರಲು ನಾವು ಬದ್ಧರಾಗಿದ್ದೇವೆ.#BTS2020 pic.twitter.com/v1v4hzLBJ4

— Dr. Ashwathnarayan C. N. (@drashwathcn) November 19, 2020

* ಪ್ರಧಾನಿ ಮೋದಿ ಅವರ ಕನಸುಗಳನ್ನು ಕರ್ನಾಟಕ ನನಸು ಮಾಡುತ್ತಿದೆ. ಅವರ ಕನಸು ಆತ್ಮನಿರ್ಭರ ಕಲ್ಪನೆಯೊಂದಿಗೆ ಕರ್ನಾಟಕವನ್ನು ನಿರ್ಮಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಪ್ರಭಾವಶಾಲಿಯಾಗಿ ಬೆಳೆಯಲಿದೆ ಎಂಬ ವಿಶ್ವಾಸ ನನ್ನದು ಎಂದು ಡಿಸಿಎಂ ತಿಳಿಸಿದರು.

* ತಂತ್ರಜ್ಞಾನ ಕ್ಷೇತ್ರವೇ ಮುಂದಿನ ದಿನಗಳಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಲಿದೆ. ಅದಕ್ಕೆ ಡಿಜಿಟಲ್ ಇಂಡಿಯಾ, ಡಿಜಿಟಲ್ ಎಕಾನಮಿ ಉಪ ಕ್ರಮಗಳು ಬಲ ತುಂಬುತ್ತಿವೆ. ಭವಿಷ್ಯದಲ್ಲಿ ತಂತ್ರಜ್ಞಾನವೇ ಆಡಳಿತ ನಡೆಸಲಿದೆ. ಆ ನಿಟ್ಟಿನಲ್ಲಿ ಭಾರತದ ಜತೆ ಕರ್ನಾಟಕವೂ ದಾಪುಗಾಲು ಇಡುತ್ತಿದೆ.

‘Today I am glad to say that 'Digital India' has become a way of life, particularly for the poor & marginalised. Thanks to Digital India our country has witnessed a more human-centric approach to development.’-PM @NarendraModi @blrtechsummit#PMModiAtBTS2020 #BTS2020 #NextIsNow pic.twitter.com/KNyp2rHJ43

— Dr. Ashwathnarayan C. N. (@drashwathcn) November 19, 2020

Share This Article
Facebook Whatsapp Whatsapp Telegram
Previous Article MAN ಮದ್ವೆಗೆ ನಿರಾಕರಿಸಿದ್ದಕ್ಕೆ ಸೇಡು – ಪ್ರಿಯತಮೆ ಹೆಸ್ರಲ್ಲಿ ಬಾಂಬ್ ಬೆದರಿಕೆ ಪತ್ರ ಬರೆದು ಸಿಕ್ಕಾಕ್ಕೊಂಡ!
Next Article lovers e1605770524479 10 ವರ್ಷ ಅಕ್ರಮ ಸಂಬಂಧ, ಯುವತಿಯ ವಿವಾಹಕ್ಕೆ ಪ್ರಿಯತಮ ನಕಾರ- ಭಾವಿ ಪತಿಯಿಂದ ಬರ್ಬರ ಹತ್ಯೆ

Latest Cinema News

dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories
rishab shetty kollur mookambika temple
Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ
Cinema Latest Main Post Sandalwood Udupi
childu movie cockroach sudhi
ಹೀರೋ ಆದ ಕಾಕ್ರೋಚ್ ಸುಧಿ: ಚೈಲ್ಡು ಸಿನಿಮಾದಲ್ಲಿ ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

first night
Bengaluru City

ಫಸ್ಟ್‌ನೈಟ್‌ನಲ್ಲಿ ಸೆಕ್ಸ್‌ಗೆ ಗಂಡ ನಿರಾಕರಿಸಿದ್ದಕ್ಕೆ ಪತ್ನಿಯಿಂದ 2 ಕೋಟಿ ಹಣಕ್ಕೆ ಡಿಮ್ಯಾಂಡ್ ಆರೋಪ

24 minutes ago
Varada River
Districts

ಹಾವೇರಿ | 1.5 ಲಕ್ಷ ಮೌಲ್ಯದ ಬ್ರಿಜ್ಡ್ ಕಂ ಬ್ಯಾರೇಜ್ ಗೇಟ್ ಕಳ್ಳತನ – ಅನ್ನದಾತರು ಕಂಗಾಲು

1 hour ago
cylinder blast sirsi
Latest

ಕಾರವಾರ| ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

2 hours ago
KSRTC bus falls into ditch 16 injured in Vijayanagar
Bellary

ಕಂದಕಕ್ಕೆ ಉರುಳಿದ ಸಾರಿಗೆ ಬಸ್‌ – 16 ಮಂದಿಗೆ ಗಾಯ

2 hours ago
HIGHCOURT
Bengaluru City

ಜಾತಿಗಣತಿ ಸಮೀಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?