ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 5.18 ಕೋಟಿ ರೂಪಾಯಿ ಬಾಡಿಗೆ ಬಾಕಿ ಉಳಿಸಿಕೊಂಡಿದ್ದ 18 ಅಂಗಡಿ ಮಳಿಗೆಗಳಿಗೆ ಬೀಗಮುದ್ರೆ ಹಾಕಲಾಗಿದೆ.
ಅಂಗಡಿ ಮಳಿಗೆಗಳನ್ನು ಬಾಡಿಗೆಗೆ ಟೆಂಡರ್ ಪಡೆದಿದ್ದ ವ್ಯಾಪಾರಿಗಳು ಅವಧಿ ಮುಗಿದರೂ ಖಾಲಿ ಮಾಡದೆ ಮುಂದುವರಿದಿದ್ದರು. ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ 20 ತಿಂಗಳ ಬಾಡಿಗೆಯನ್ನೂ ಮನ್ನಾ ಮಾಡಿತ್ತು. ಆದರೂ ಸಹ 5.18 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದರು.
ಈ ಹಿನ್ನಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 18 ಅಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿದೆ.