ಹಬ್ಬಕ್ಕೆ ಸ್ನಾನ ಮಾಡಲು ಕೆರೆಗೆ ತೆರಳಿದ ಐವರು ಬಾಲಕರ ದುರ್ಮರಣ!

Public TV
1 Min Read
CHILDREN

ಹೈದರಾಬಾದ್: ಯುಗಾದಿ ಹಬ್ಬದ ದಿನದಂದೇ ಕೆರೆಯಲ್ಲಿ ಮುಳುಗಿ ಐವರು ಬಾಲಕರು ಮೃತಪಟ್ಟಿರುವ ಘಟನೆ ನಾಲ್ಗಾಂಡ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಸಂತೋಷ್ (7), ರಾಕೇಶ್ (5), ನವ್ದೀಪ್ (6), ಸತ್ವಿಕ್ (7) ಮತ್ತು ಸರ್ದಾರ್ ಎಂದು ಗುರುತಿಸಲಾಗಿದೆ. ಈ ಐವರು ಬಾಲಕರು ಕೋಂಡಮಲ್ಲೆಪಲ್ಲಿ ಮಂಡಲ್ ದಲ್ಲಿರುವ ಕೆರೆಗೆ ಸ್ನಾನ ಮಾಡಲು ತೆರಳಿದ್ದರು.

ಸ್ನಾನ ಮಾಡಲು ಹೋದ ಮಕ್ಕಳು ತುಂಬಾ ಸಮಯವಾದರೂ ಮನೆಗೆ ಹಿಂದಿರುಗಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ತಮ್ಮ ಮಕ್ಕಳು ಸಿಗದೇ ಇದ್ದಾಗ ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

CHILDREN 1

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸ್ನಾನ ಮಾಡಲು ಹೋದಾಗ ಕೆರೆಯ ಆಳದ ಜಾಗದಲ್ಲಿ ಮುಳುಗಿ ಬಾಲಕರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸದ್ಯಕ್ಕೆ ಬಾಲಕರ ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ ಎಂದು ನಲ್ಗೊಂಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎ. ರಂಗನಾಥ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *