ಚೆನ್ನೈ: ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದಕ್ಕೆ ವಿಶೇಷ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.
ಸೌಂದರ್ಯ ಸ್ಪರ್ಧೆಯಲ್ಲಿ ಪೊಲೀಸ್ ಸಿಬ್ಬಂದಿ ರ್ಯಾಂಪ್ ವಾಕ್ ಮಾಡಿದ ಹಿನ್ನೆಲೆ ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಅಮೃತ ಮಹೋತ್ಸವಕ್ಕೆ 750 ಗ್ರಾಮೀಣ ಹೆಣ್ಣುಮಕ್ಕಳೇ ತಯಾರಿಸಿದ ಆಜಾದಿ ಉಪಗ್ರಹ ಉಡಾವಣೆ – ಏನಿದರ ವಿಶೇಷತೆ?
- Advertisement 2
- Advertisement 3
ಕಳೆದ ಭಾನುವಾರ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್ನಲ್ಲಿ ಖಾಸಗಿ ಸಂಸ್ಥೆಯೊಂದು ಸೌಂದರ್ಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಇದರಲ್ಲಿ ನಟಿ ಯಶಿಕಾ ಆನಂದ್ ವಿಶೇಷ ಅಥಿತಿಯಾಗಿ ಭಾಗವಹಿಸಿ, ಸ್ಪರ್ಧೆಯನ್ನು ಉದ್ಘಾಟಿಸಿದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ವೈರಲ್ ಆಗಿತ್ತು. ಇದನ್ನೂ ಓದಿ: ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ
- Advertisement 4
ನಾಗಪಟ್ಟಣಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜವಗರ್ ಅವರು, ಪ್ರಸ್ತುತ ಸೆಂಬನಾರ್ಕೋವಿಲ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಸಹಾಯಕ ಇನ್ಸ್ಪೆಕ್ಟರ್ ಸುಬ್ರಮಣಿಯನ್ ಸೇರಿದಂತೆ ರೇಣುಕಾ, ಅಶ್ವಿನಿ, ನಿತ್ಯಶೀಲಾ ಮತ್ತು ಶಿವನೇಸನ್ ಅನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.