ಚಿತ್ರದುರ್ಗ: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ದಾಖಲೆ ಇಲ್ಲದೇ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಹಿರಿಯೂರು ನಗರ ಠಾಣೆ ಪೊಲೀಸರು (Hiriyur Police) ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 5 ಕೆಜಿ 250 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಇದು ದಾವಣಗೆರೆಯ ವರ್ಧಮಾನ ಜುವೆಲರಿಗೆ ಸೇರಿದ ಚಿನ್ನಾಭರಣ ಎಂದು ತಿಳಿದುಬಂದಿದೆ. ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಇದನ್ನೂ ಓದಿ: ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ
ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ‘ಲೋಕ’ಸಮರಕ್ಕೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು – ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ