Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ಒಂದೇ ಕ್ಷೇತ್ರದಲ್ಲಿ ‘ಪನ್ನೀರಸೆಲ್ವಂ’ ಹೆಸರಿನ ಐವರು ಕಣಕ್ಕೆ – ಮಾಜಿ ಸಿಎಂ ಪನ್ನೀರಸೆಲ್ವಂಗೆ ಪೀಕಲಾಟ!

Public TV
Last updated: March 29, 2024 1:34 pm
Public TV
Share
2 Min Read
Panneerselvam
SHARE

– ತಮಿಳುನಾಡಿನ ರಾಮನಾಥಪುರಂ ‘ಪನ್ನೀರಸೆಲ್ವಂ’ ಹೆಸರಲ್ಲಿ 5 ನಾಮಪತ್ರ ಸಲ್ಲಿಕೆ

ಚೆನ್ನೈ: ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಯನ್ನು ಸೋಲಿಸಲು ಹಾಗೂ ಮತದಾರರಲ್ಲಿ ಗೊಂದಲ ಮೂಡಿಸಲು ತಂತ್ರಗಳನ್ನು ಹೆಣೆಯುವುದು ಸಾಮಾನ್ಯ. ಅದೇ ರೀತಿ, ತಮಿಳುನಾಡು (Tamil Nadu) ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ (Panneerselvam) ಅವರನ್ನು ಮಣಿಸಲು ತಂತ್ರ ರೂಪಿಸಲಾಗಿದೆ.

ತಮಿಳುನಾಡಿನ ಮಾಜಿ ಸಿಎಂ ಓ. ಪನ್ನೀರಸೆಲ್ವಂ ಅವರು ಲೋಕಸಭಾ ಚುನಾವಣೆಗೆ ರಾಮನಾಥಪುರಂ (Ramanathapuram) ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ ‘ಪನ್ನೀರಸೆಲ್ವಂ’ ಎಂದೇ ಹೆಸರಿರುವ ಈತರೆ ನಾಲ್ವರು ಸ್ವತಂತ್ರ ಅಭ್ಯರ್ಥಿಗಳಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌

Panneerselvam lok sabha

ಈಗ ಮಾಜಿ ಸಿಎಂ ಪನ್ನೀರಸೆಲ್ವಂ ಅವರು ಪ್ರಮುಖ ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಮಾತ್ರವಲ್ಲದೇ, ತಮ್ಮದೇ ಹೆಸರಿನ ಇತರ ನಾಲ್ವರ ವಿರುದ್ಧ ಚುನಾವಣಾ ಕಣದಲ್ಲಿ ಹೋರಾಡಬೇಕಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಇತರ ನಾಲ್ಕು ನಾಮಪತ್ರಗಳು ಮಧುರೈನ ಉಸಿಲಂಪಟ್ಟಿ, ದಕ್ಷಿಣ ಕತ್ತೂರ್, ವಾಗೈಕುಲಂ ಗ್ರಾಮ ಮತ್ತು ಮಧುರೈ ಚೋಲೈ ಅಜಕುಪುರಂನಿಂದ ಸಲ್ಲಿಕೆಯಾಗಿವೆ.

ಮಾಜಿ ಮುಖ್ಯಮಂತ್ರಿ ಪನ್ನೀರಸೆಲ್ವಂ ಅವರು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಎಐಎಡಿಎಂಕೆ ಸ್ವಯಂಸೇವಕ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ರಾಮನಾಥಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಕ್ಷೇತ್ರದಲ್ಲಿ ಕೈತಪ್ಪಿ ಹೋಗಿರುವ ಎಲ್ಲ ಯೋಜನೆಗಳನ್ನು ಮರಳಿ ತರಲು ಶ್ರಮಿಸುತ್ತೇನೆ. ಅಷ್ಟೇ ಅಲ್ಲ, ಪ್ರತಿನಿತ್ಯ ಸಂಕಷ್ಟಕ್ಕೆ ಸಿಲುಕುತ್ತಿರುವ ಮೀನುಗಾರರ ರಕ್ಷಣೆಯ ಸಮಸ್ಯೆಯನ್ನು ಮುಂದಿಟ್ಟುಕೊಂಡು ಹೋಗುತ್ತೇನೆ. ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಭರವಸೆ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌, ಯುಪಿ ರಾಜಕಾರಣಿ ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದ ಸಾವು

O Panneerselvam Edappadi Palaniswami e1657554245565

ಎಐಎಡಿಎಂಕೆಯಿಂದ ಉಚ್ಚಾಟನೆ ವಿರುದ್ಧ ಕಾನೂನು ಹೋರಾಟ ಮುಂದುವರಿಸಿರುವ 74 ವರ್ಷದ ಮಾಜಿ ಸಿಎಂ, ಲೋಕಸಭೆ ಚುನಾವಣೆಗೆ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.

ರಾಮನಾಥಪುರದಲ್ಲಿ ಒಟ್ಟು 23 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಮನಿರ್ದೇಶಿತ ಕೆ.ನವಾಸ್ಕಾನಿ ಮತ್ತು ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆಯ ಪಿ.ಜಯಪೆರುಮಾಳ್ ಸೇರಿದ್ದಾರೆ. ಪ್ರಮುಖ ಸ್ಪರ್ಧಿಗಳ ಹೆಸರನ್ನು ಹೋಲುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದು ಹೊಸದೇನಲ್ಲ. ಬಹುತೇಕ ಎಲ್ಲಾ ಚುನಾವಣೆಗಳಲ್ಲಿ ಇದು ಸಾಕ್ಷಿಯಾಗಿದೆ. ಇದನ್ನೂ ಓದಿ: ರಾಯ್ ಬರೇಲಿ, ಅಮೇಥಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ?

TAGGED:Lok Sabha Election 2024PanneerselvamRamanathapuramtamil nadu
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
23 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
33 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
47 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 hour ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?