ಧನ್ಬಾದ್: ಕಾರು ಸ್ಕಿಡ್ ಆಗಿ ಕಂದಕಕ್ಕೆ ಬಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ಇಂದು ಸಂಭವಿಸಿದೆ.
ಧನ್ಬಾದ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 2 ಅಲ್ಲಿ ಕಾರು ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಕುಟುಂಬದ ಮಗು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ಸ್ಥಳೀಯ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತರು ಜಾರ್ಖಂಡ್ನ ರಾಮಗಢ ಜಿಲ್ಲೆಯ ಘಾಟೋ ನಿವಾಸಿಗಳಾಗಿದ್ದು, ಅಸನ್ಸೋಲ್ಗೆ ತೆರಳಿದ್ದರು. ಅಪಘಾತದಲ್ಲಿ ಮೃತಪಟ್ಟ ಇಬ್ಬರು ಪುರುಷ ಸದಸ್ಯರನ್ನು ವಾಸಿಂ ಅಕ್ರಮ್ ಮತ್ತು ಶಕೀಲ್ ಅಖ್ತರ್ ಎಂದು ಗುರುತಿಸಲಾಗಿದೆ ಎಂದು ವರದಿಗಳ ಪ್ರಕಾರ ತಿಳಿದುಬರುತ್ತೆ. ಇದನ್ನೂ ಓದಿ: ಸ್ಕ್ರೀನ್ನಲ್ಲಿ ಅಪ್ಪು ಬಯೋಪಿಕ್ – ಸುಳಿವು ನೀಡಿದ ಸಂತೋಷ್ ಆನಂದ್ರಾಮ್
ಸ್ಥಳೀಯವರ ಪ್ರಕಾರ ಅಪಘಾತಕ್ಕೆ ಒಳಗಾದ ಸ್ವಿಫ್ಟ್ ಡಿಸೈರ್ ಕಾರು ಅತಿವೇಗದಲ್ಲಿ ಚಲಿಸಿದ್ದೆ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಕಾರನ್ನು ಅಧಿಕಾರಿಗಳು ಹೊರತೆಗೆದಿದ್ದಾರೆ.