ಅಮಾವಾಸ್ಯೆ ಬೆನ್ನಲ್ಲೇ ಪ್ರತ್ಯೇಕ ಅಪಘಾತಗಳಲ್ಲಿ 5 ಮಂದಿ ದುರ್ಮರಣ!

Public TV
1 Min Read
MND AMAVASYE ACCIDENT

ಮಂಡ್ಯ: ಅಮಾವಾಸ್ಯೆ ಬೆನ್ನಲ್ಲೇ ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಒಟ್ಟು ಐದು ಮಂದಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ನಗರದ ಹೊರವಲಯದಲ್ಲಿ ಭಾನುವಾರ ಬೆಳಗ್ಗೆ ನಡೆದ ಬೈಕ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಪ್ರವೀಣ್ ಹಾಗೂ ಪ್ರಮೋದ್ ಇಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಮದ್ದೂರು ತಾಲೂಕಿನ ಬೆಸಗರಹಳ್ಳಿ ಬಳಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಟ್ರಾಕ್ಟರ್ ಚಾಲಕ ಶಿವಕುಮಾರ್ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಬಗ್ಗೆ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Mnd amavasye Accident 2

ಮದ್ದೂರು ಪಟ್ಟಣದ ಟಿಎಪಿಸಿಎಂಎಸ್ ಗೋದಾಮಿನ ಬಳಿ ಕಾರ್ ಪಲ್ಟಿಯಾಗಿ ಬೆಂಗಳೂರಿನ ಉಮೇಶ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪ ಬೈಕ್ ನಿಂದ ಆಯತಪ್ಪಿ ಬಿದ್ದು ನಾಗೇಂದ್ರ ಎಂಬ ಯುವಕ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *