Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

Bengaluru City

ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

Public TV
Last updated: February 9, 2023 4:40 pm
Public TV
Share
3 Min Read
BASAVARAJ BOMMAI 13
SHARE

ಬೆಂಗಳೂರು: ರಾಜಧಾನಿಯಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ (Traffic Police Station) ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸುವ ಉದ್ದೇಶವಿದ್ದು, 12 ಕಾರಿಡಾರ್ ರಸ್ತೆಗಳನ್ನು ಕೂಡ ಹೊಸದಾಗಿ ನಿರ್ಮಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಬಿಬಿಎಂಪಿ ವತಿಯಿಂದ ಆಯೋಜಿಸಿದ್ದ ಹೆಚ್‌ಎಎಲ್‌ ವಿಮಾನ ನಿಲ್ದಾಣದ ವಾರ್ಡ್, ಮಹದೇವಪುರ ವಲಯ ವ್ಯಾಪ್ತಿಯಲ್ಲಿನ ಸುರಂಜನ್‌ ದಾಸ್ ಜಂಕ್ಷನ್ ಬಳಿಯ ಕೆಳಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇದನ್ನೂ ಓದಿ: ಹೆಚ್‌ಡಿಕೆ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನ ಒಡೆಯುತ್ತಿದ್ದಾರೆ : ಸಿಪಿವೈ

TRAFFIC POLICE 1

ಲೋಕಾರ್ಪಣೆಯಾಗಿರುವ ಕೆಳಸೇತುವೆಯಿಂದಾಗಿ ವೈಟ್ ಫೀಲ್ಡ್‌ನಿಂದ ಹಿಡಿದು ಎಂಜಿ ರಸ್ತೆಯವರೆಗೆ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ. ವಾಹನಗಳು ಇನ್ಮುಂದೆ ಸುಗಮವಾಗಿ ಸಂಚಾರ ಮಾಡಬಹುದಾಗಿದೆ. ಹಿಂದೊಮ್ಮೆ ಹೆಚ್‌ಎಎಲ್ ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ನೋಡಿ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕೆಲಸವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿರುವ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ದೀರ್ಘಾವಧಿ ಮತ್ತು ಅಲ್ಪಾವಧಿ ಕಾರ್ಯಕ್ರಮ
ಬೆಂಗಳೂರು ಅತಿ ವೇಗದಲ್ಲಿ ಬೆಳೆಯುತ್ತಿರುವ ನಗರ. ಪ್ರತಿನಿತ್ಯ 5 ಸಾವಿರ ವಾಹನಗಳು ರಸ್ತೆಗಿಳಿಯುತ್ತವೆ. ಬೆಂಗಳೂರಿನಲ್ಲಿ ಪ್ರತಿ ದಿನ 10 ಲಕ್ಷ ಜನ ಬಂದುಹೋಗುವವರಿದ್ದಾರೆ. ಇದರ ಪರಿಹಾರಕ್ಕೆ ಹಲವಾರು ದೀರ್ಘಾವಧಿ ಮತ್ತು ಅಲ್ಪಾವಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ. ಸಂಚಾರ ಸುಗಮಗೊಳಿಸಲು ಅಮೃತ ನಗರೋತ್ಥಾನದಲ್ಲಿ 11 ಮೇಲ್ಸೇತುವೆಗಳನ್ನು ಕೈಗೊಂಡಿದ್ದು ಅನುಮೋದನೆಯನ್ನೂ ನೀಡಲಾಗಿದೆ. ಬೆಂಗಳೂರಿನ ಇತಿಹಾಸದಲ್ಲಿಯೇ ಒಂದೇ ವರ್ಷ 11 ಮೇಲ್ಸೇತುವೆಗಳಿಗೆ ಅನುಮೋದನೆ ನೀಡಿರುವುದು ಇದೇ ಪ್ರಥಮ ಬಾರಿ. ಬೆಂಗಳೂರಿಗೆ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಮಾಡಿದಾಗ ಮಾತ್ರ ಬೆಂಗಳೂರಿನ ನಾಗರಿಕರಿಗೆ ಪರಿಹಾರ ನೀಡಿದಂತಾಗುತ್ತದೆ ಎಂಬ ನಿಲುವಿನಿಂದ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ 3,000 ಕೋಟಿ ರೂ. ಅನುದಾನವನ್ನು ರಸ್ತೆ ನಿರ್ಮಾಣಕ್ಕೆ ಒದಗಿಸಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ

traffic police

ವಾಹನ ದಟ್ಟಣೆ ನಿಯಂತ್ರಣ
ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ವಿಶೇಷ ಆಯುಕ್ತರನ್ನು ನೇಮಿಸಲಾಗಿದ್ದು, ಸಂಚಾರ ದಟ್ಟಣೆಯನ್ನು ಬಹಳಷ್ಟು ಕಡಿಮೆ ಮಾಡಲಾಗಿದೆ. ಹೊರಗಿನಿಂದ ಬರುವ ವಾಹನಗಳನ್ನು ನಿಯಂತ್ರಿಸಿ ಇಲ್ಲಿ ಹೆಚ್ಚು ದಕ್ಷತೆಯಿಂದ ಸಂಚಾರ ಪೋಲಿಸರನ್ನು ನಿಯೋಜಿಸಿ, ವಾಹನ ದಟ್ಟಣೆಯನ್ನು ಕಡಿಮೆ ಮಾಡಲಾಗಿದೆ.

ಬೆಂಗಳೂರಿನ ಅಭಿವೃದ್ದಿಗೆ ಅನುದಾನ
ಸಬ್ ಅರ್ಬನ್ ರೈಲಿಗೆ ಈಗಾಗಲೇ ನಮ್ಮ ಪ್ರಧಾನಿಗಳು ಲೋಕಾರ್ಪಣೆ ಮಾಡಿದ್ದು, ಕಾಮಗಾರಿ ಪ್ರಾರಂಭವಾಗಿದೆ. ಸ್ಯಾಟೆಲೈಟ್ ರಿಂಗ್ ರೋಡ್ ಕಾಮಗಾರಿ ಪ್ರಗತಿಯಲ್ಲಿದೆ. ಪಿಆರ್‌ಆರ್ ಬಗ್ಗೆ ಆದಷ್ಟು ಬೇಗನೆ ತೀರ್ಮಾನ ಮಾಡಲಾಗುವುದು. ಮೆಟ್ರೊ 3ನೇ ಹಂತಕ್ಕೆ ಚಾಲನೆ ನೀಡಿದ್ದೇವೆ. ರಾಜಕಾಲುವೆಗಳ ಸಮಸ್ಯೆಗೆ 2 ಸಾವಿರ ಕೊಟಿ ರೂ. ಒದಗಿಸಿದೆ. ಅಡೆತಡೆಗಳನ್ನು ತೆರವುಗೊಳಿಸಿ ಸಮಸ್ಯೆಗೆ ಪರಿಹಾರ ನೀಡುತ್ತಿದ್ದೇವೆ. ಸರ್ಕಾರ ಬೆಂಗಳೂರಿನ ಅಭಿವೃದ್ದಿಗೆ ಅನುದಾನ ಒದಗಿಸಿದೆ. ಪ್ರಮುಖ ಕೆರೆಗಳಿಗೆ ಗೇಟ್ ಅಳವಡಿಸಿ ನೀರಿನ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ವರ್ಷ 11 ಮೇಲ್ಸೇತುವೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಸೂಚಿಸಿದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್

ಸ್ಪಂದನಾಶೀಲ ಸರ್ಕಾರ
ನಮ್ಮದು ಸ್ಪಂದನಾಶೀಲ ಸರ್ಕಾರ. ಬೆಂಗಳೂರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ನಮ್ಮ ಸಚಿವರು ಅವರವರ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ನಗರದ ಅಭಿವೃದ್ದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ಬ್ರ್ಯಾಂಡ್ ಉಳಿಸುವ ನಿಟ್ಟಿನಲ್ಲಿ ನಮ್ಮ‌ ಕೆಲಸ ನಡೆದಿದೆ ಎಂದರು.

ಸಚಿವರಾದ ಬಿ.ಎ.ಬಸವರಾಜ, ಮುರುಗೇಶ್ ನಿರಾಣಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಗಾರ ರಾಕೇಶ್ ಸಿಂಗ್, ಆರೋಗ್ಯ ಇಲಾಖೆ ವಿಶೇಷ ಆಯುಕ್ತ ಡಾ. ಕೆ.ವಿ.ತ್ರಿಲೋಕ್ ಚಂದ್ರ ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaibengaluruTraffic Police Stationಟ್ರಾಫಿಕ್‌ ಪೊಲೀಸ್‌ ಠಾಣೆಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
40 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
1 hour ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
2 hours ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
2 hours ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
2 hours ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?