[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾಣೆಯಾಗಿದ್ದ ಬಾಲಕ ಮಂಗಳಮುಖಿ ವೇಷದಲ್ಲಿ ಪತ್ತೆ ಪ್ರಕರಣ- ಐವರ ಬಂಧನ

Public TV
Last updated: December 19, 2018 9:58 am
Public TV
2 Min Read

ಮಂಡ್ಯ: ಜಿಲ್ಲಯ ಕೆ.ಆರ್.ಪೇಟೆ ತಾಲೂಕಿನ ಅಪ್ರಾಪ್ತನನ್ನು ಪುಸಲಾಯಿಸಿ ತೃತೀಯ ಲಿಂಗಿಯಾಗಿ ಪರಿವರ್ತಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕೆ.ಆರ್.ಪೇಟೆ ಪೊಲೀಸರು, ಈ ಸಂಬಂಧ ಐವರನ್ನು ಬಂಧಿಸಿದ್ದಾರೆ.

ಅಪ್ರಾಪ್ತನನ್ನು ತೃತೀಯ ಲಿಂಗಿಯಾಗಿ ಪರಿವರ್ತಿಸಿದ ಆರೋಪದ ಮೇಲೆ ಮಂಗಳಮುಖಿಯರಾದ ಜಯಶ್ರೀ, ಮಂದಾರ, ಮಹೇಶ್ವರಿ ಮತ್ತು ಆತನ ಜೊತೆ ನಿರಂತರ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪ ಮೇಲೆ ಅರವಿಂದ್ ಹಾಗೂ ಅಜಯ್ ಎಂಬವರನ್ನು ಬಂಧಿಸಲಾಗಿದೆ.

ಏನಿದು ಪ್ರಕರಣ?
ತಾಲೂಕಿನ ಗ್ರಾಮವೊಂದರಿಂದ ಫೆ. 4ರಂದು ಅಪ್ರಾಪ್ತ ನಾಪತ್ತೆಯಾಗಿದ್ದ. ಈತನನ್ನು ಎಷ್ಟೇ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಆದರೆ, ಅಕ್ಟೋಬರ್ ನಲ್ಲಿ ಇದ್ದಕ್ಕಿದ್ದಂತೆ ಗ್ರಾಮಕ್ಕೆ ಬಂದ ಆತ ತೃತೀಯ ಲಿಂಗಿಯಾಗಿ ಪರಿವರ್ತನೆಯಾಗಿದ್ದ. ಇದನ್ನು ಕಂಡು ಕುಟುಂಬದವರು ಗಾಬರಿಗೊಂಡಿದ್ದರು. ಈ ಬಳಿಕ ಅಪ್ರಾಪ್ತನ ಅಜ್ಜಿ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮೊಮ್ಮಗನ ಸ್ಥಿತಿಗೆ ಕಾರಣರಾದರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಬಳಿಕ ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಹೊಸ ವಿಷಯಗಳು ತಿಳಿದುಬಂದಿತು. ಪ್ರಕರಣದಲ್ಲಿ ಹಲವು ಜನರ ಕೃತ್ಯ ಇರುವುದು ಬೆಳಕಿಗೆ ಬಂದಿದೆ.

10ನೇ ತರಗತಿ ವಿದ್ಯಾಭ್ಯಾಸ ನಿಲ್ಲಿಸಿದ ಅಪ್ರಾಪ್ತ ಬೆಂಗಳೂರಿನ ಹೊಟೇಲ್‍ವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು. ಆಗಾಗ ಅಜ್ಜಿ ಹಾಗೂ ಅಪ್ಪನ ಜೊತೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದನು. ಈ ವೇಳೆ ಈತನಿಗೆ ಮಂಗಳಮುಖಿಯರ ಪರಿಚಯವಾಗಿದೆ. ಬಡ ಹುಡುಗನ ಕಷ್ಟವನ್ನು ತಿಳಿದ ಅವರು, ಹಣ ಕೊಟ್ಟು ಪುಸಲಾಯಿಸಿದ್ದರು. ಕೆಲ ದಿನದ ನಂತರ ತಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿದ್ದು, ಬಳಿಕ ಸೀರೆ ಉಡಿಸಿ, ಭಿಕ್ಷಾಟನೆ ಮಾಡಿಸಿದ್ದಾರೆ. ದಿನ ಕಳೆದಂತೆ ಆತನು ಅವರಂತೆಯೇ ಆಡಲು ಪ್ರಾರಂಭಿಸಿದ್ದಾನೆ. ಇದನ್ನೇ ದುರುಪಯೋಗಪಡಿಸಿಕೊಂಡ ಮಂಗಳಮುಖಿಯರು ಜೂ. 29ರಂದು ಬೆಂಗಳೂರಿನ ನಾಗರಬಾವಿ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗ ಪರಿವರ್ತನೆಯ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.

700ಕ್ಕೂ ಹೆಚ್ಚು ಚಿಕಿತ್ಸೆ:
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಶಸ್ತ್ರಚಿಕಿತ್ಸೆ ಮಾಡಿದ ಖಾಸಗಿ ಆಸ್ಪತ್ರೆಗೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಜೊತೆಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರನ್ನು ಪತ್ತೆ ಮಾಡಿದ್ದಾರೆ. 2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಪ್ರಕಾರ ಅಪ್ರಾಪ್ತರನ್ನು ಬಲವಂತವಾಗಿ ಲೈಂಗಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವುದು ಅಪರಾಧ. ಆದರೆ, ಕಾನೂನು ಬಾಹಿರವಾಗಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆ ಪೊಲೀಸರು ವೈದ್ಯರೊಬ್ಬರನ್ನು ಕರೆ ತಂದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ 700ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆ ವೇಳೆ ಪ್ರಜ್ಞಾಹೀನರಾದ ವೈದ್ಯರನ್ನು ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರೋಗ್ಯ ಚೇತರಿಸಿಕೊಂಡ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ. ಈತ ಅಪ್ರಾಪ್ತನಾದರೂ 19 ವರ್ಷ ವಯಸ್ಸಾಗಿದ್ದು, ಶಸ್ತ್ರಚಿಕಿತ್ಸೆ ಮಾಡಬಹುದು ಎಂದು ವಕೀಲರೊಬ್ಬರು ನೋಟರಿ ನೀಡಿದ್ದಾರೆ. ಆದರೆ ಶಾಲೆಯಲ್ಲಿ ತನಿಖೆ ನಡೆಸಿದ ವೇಳೆ ಆತನಿಗೆ 16 ವರ್ಷ ವಯಸ್ಸಾಗಿದೆ ಎಂದು ತಿಳಿದುಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:arrestboymandyamissingPublic TVTransgenderಅರೆಸ್ಟ್ತೃತೀಯ ಲಿಂಗಿನಾಪತ್ತೆಪಬ್ಲಿಕ್ ಟಿವಿಬಾಲಕಮಂಡ್ಯ

You Might Also Like

Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
7 hours ago
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
8 hours ago
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
8 hours ago
Bengaluru City

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
By Public TV
8 hours ago
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-1

Public TV
By Public TV
8 hours ago
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-2

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account