Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್

Latest

ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್

Public TV
Last updated: May 10, 2025 2:45 pm
Public TV
Share
3 Min Read
Hafiz Saeed Mosque
SHARE

– ಲಷ್ಕರ್-ಎ-ತೈಬಾದ ಇಬ್ಬರು, ಜೈಶ್-ಎ-ಮೊಹಮ್ಮದ್‌ನ ಮೂವರು ಉಗ್ರರು ಬಲಿ

ನವದೆಹಲಿ: ಪಹಲ್ಗಾಮ್ ದಾಳಿಗೆ(Pahalgam Attack) ಪ್ರತೀಕಾರವಾಗಿ ಮೇ 7ರಂದು `ಆಪರೇಷನ್ ಸಿಂಧೂರ'(Operation Sindoor) ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏ.22ರಂದು ಪಾಕ್‌ನ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ಮಾಡಿ 26 ಮಂದಿ ಅಮಾಯಕರನ್ನು ಕೊಂದಿದ್ದರು. ಇದಕ್ಕೆ ಪ್ರತೀಕಾರ ದಾಳಿಯಾದ ಮೇ 7ರಂದು ಪಾಕ್ 9 ಸ್ಥಳಗಳಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಭಾರತಕ್ಕೆ ಬೇಕಿದ್ದ ಐವರು ಉಗ್ರರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಯುದ್ಧ ಭೀತಿ – ಕರ್ನಾಟಕದ ಪೊಲೀಸರಿಗೆ ರಜೆ ರದ್ದು: ಪರಮೇಶ್ವರ್‌

ಮುದಸ್ಸರ್ ಖಾದಿಯಾನ್ ಖಾಸ್(Mudassar Khadian Khas) ಅಲಿಯಾಸ್ ಮುದಸ್ಸರ್ ಅಲಿಯಾಸ್ ಅಬು ಹತನಾಗಿದ್ದಾನೆ. ಈತ ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾದಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ಮುರಿಡ್ಕೆಯ ಮರ್ಕಜ್ ತೈಬಾದ ಉಸ್ತುವಾರಿಯಾಗಿದ್ದ. ಈತನ ಅಂತ್ಯಕ್ರಿಯೆ ವೇಳೆ ಪಾಕಿಸ್ತಾನ ಸೇನೆಯು ಗೌರವ ವಂದನೆ ಸಲ್ಲಿಸಿತ್ತು. ಪಾಕ್ ಸೇನಾ ಮುಖ್ಯಸ್ಥ ಮತ್ತು ಪಂಜಾಬ್ ಸಿಎಂ ಮರ್ಯಮ್ ನವಾಜ್ ಪರವಾಗಿ ಮಾಲಾರ್ಪಣೆ ಮಾಡಲಾಯಿತು. ಜೆಯುಡಿನ ಹಫೀಜ್ ಅಬ್ದುಲ್ ರೌಫ್ ನೇತೃತ್ವದಲ್ಲಿ ಸರ್ಕಾರಿ ಶಾಲೆಯಲ್ಲಿ ಅಂತ್ಯಕ್ರಿಯೆಯ ಪ್ರಾರ್ಥನೆ ಸಲ್ಲಿಸಲಾಯಿತು. ಈತನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಮತ್ತು ಪಂಜಾಬ್ ಪೊಲೀಸ್ ಐಜಿ ಭಾಗವಹಿಸಿದ್ದರು. ಇದನ್ನೂ ಓದಿ: ಪಾಕ್ ಶೆಲ್ ದಾಳಿಗೆ ಜಮ್ಮು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು

ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಹಫೀಜ್ ಮುಹಮ್ಮದ್ ಜಮೀಲ್(Hafiz Muhammed Jameel) ಮೃತಪಟ್ಟಿದ್ದಾನೆ. ಈತ ಮೌಲಾನಾ ಮಸೂದ್ ಅಜರ್‌ನ ಹಿರಿಯ ಸೋದರ ಮಾವನಾಗಿದ್ದ. ಅಲ್ಲದೇ ಬಹವಲ್ಪುರದ ಮರ್ಕಜ್ ಸುಭಾನ್ ಅಲ್ಲಾದ ಉಸ್ತುವಾರಿಯಾಗಿದ್ದ. ಯುವಕರ ಮೂಲಭೂತ ಬೋಧನೆ ಮತ್ತು ಜೆಇಎಂಗೆ ನಿಧಿಸಂಗ್ರಹಣೆಯಲ್ಲಿ ಹಫೀಜ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.

ಜೈಶ್-ಎ-ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮತ್ತೊಬ್ಬ ಉಗ್ರ ಮೊಹಮ್ಮದ್ ಯೂಸುಫ್ ಅಜರ್(Mohammad Yusuf Azhar) ಅಲಿಯಾಸ್ ಉಸ್ತಾದ್ ಜಿ ಅಲಿಯಾಸ್ ಮೊಹಮ್ಮದ್ ಸಲೀಮ್ ಅಲಿಯಾಸ್ ಘೋಸಿ ಸಹಾಬ್ ಸಾವನ್ನಪ್ಪಿದ್ದಾನೆ. ಈತನೂ ಸಹ ಮೌಲಾನಾ ಮಸೂದ್ ಅಜರ್‌ನ ಸೋದರ ಮಾವನಾಗಿದ್ದ. ಈತ ಜೆಇಎಂಗಾಗಿ ಶಸ್ತ್ರಾಸ್ತ್ರ ತರಬೇತಿಯನ್ನು ನಿರ್ವಹಿಸಿದ್ದ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದ. ಈತ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ. ಇದನ್ನೂ ಓದಿ: Video | ರಾಜಸ್ಥಾನದ ಪೋಖ್ರಾನ್‌ ಮೇಲೆ ಪಾಕ್‌ ಬಳಸಿದ ಬೃಹತ್‌ ಮಿಸೈಲ್‌ ಉಡೀಸ್‌!

ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾದ ಉಗ್ರ ಅಬು ಆಕಾಶಾ(Abu Akasha) ಅಲಿಯಾಸ್ ಖಾಲಿದ್ ಹತನಾಗಿದ್ದಾನೆ. ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಅಫ್ಘಾನಿಸ್ತಾನದಿಂದ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ. ಫೈಸಲಾಬಾದ್‌ನಲ್ಲಿ ನಡೆದ ಈತನ ಅಂತ್ಯಕ್ರಿಯೆಯಲ್ಲಿ ಹಿರಿಯ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಮತ್ತು ಫೈಸಲಾಬಾದ್‌ನ ಉಪ ಆಯುಕ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಪೊಲೀಸರೇ ಅರೆಸ್ಟ್‌ – ಪಾಕ್‌ ಹಿಡಿತದಲ್ಲಿದ್ದ ನಗರ ವಶಕ್ಕೆ ಪಡೆದ ಬಲೂಚ್‌ ಹೋರಾಟಗಾರರು

ಜೈಶ್-ಎ-ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮೊಹಮ್ಮದ್ ಹಸನ್ ಖಾನ್(Mohammad Hassan Khan) ಮೃತಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಜೆಇಎಂನ ಕಾರ್ಯಾಚರಣಾ ಕಮಾಂಡರ್ ಮುಫ್ತಿ ಅಸ್ಗರ್ ಖಾನ್ ಕಾಶ್ಮೀರಿ ಅವರ ಮಗನಾಗಿದ್ದ. ಹಸನ್ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಇದನ್ನೂ ಓದಿ: ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

ಪ್ರಮುಖ ಉಗ್ರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಈ 5 ಉಗ್ರರು ಆಪರೇಷನ್ ಸಿಂಧೂರದಲ್ಲಿ ಮೃತಪಟ್ಟಿದ್ದಾರೆ. ಇದೀಗ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.

TAGGED:Operation SindoorPahalgam AttackpakistanPakistan Terroristsಆಪರೇಷನ್‌ ಸಿಂಧೂರಪಹಲ್ಗಾಮ್ ದಾಳಿಪಾಕಿಸ್ತಾನಪಾಕಿಸ್ತಾನ ಉಗ್ರರು
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
6 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
9 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
44 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
58 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?