Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2030ರ ವೇಳೆಗೆ 5,000 ಕೋಟಿ ರೂ. ವಹಿವಾಟು ಗುರಿ – ಸಚಿವ ಎಂ.ಬಿ ಪಾಟೀಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2030ರ ವೇಳೆಗೆ 5,000 ಕೋಟಿ ರೂ. ವಹಿವಾಟು ಗುರಿ – ಸಚಿವ ಎಂ.ಬಿ ಪಾಟೀಲ್‌

Bengaluru City

2030ರ ವೇಳೆಗೆ 5,000 ಕೋಟಿ ರೂ. ವಹಿವಾಟು ಗುರಿ – ಸಚಿವ ಎಂ.ಬಿ ಪಾಟೀಲ್‌

Public TV
Last updated: January 5, 2024 3:06 pm
Public TV
Share
3 Min Read
KSDL
SHARE

– ಸಾಬೂನು ಕಾರ್ಖಾನೆ ಸಿಬ್ಬಂದಿಗೆ 5 ಲಕ್ಷ ವಿಮೆ ಸೌಲಭ್ಯ
– ಕೆಎಸ್‌ಡಿಎಲ್‌ ಆವರಣದಲ್ಲಿ ಸರ್ಕಾರಿ ಕಚೇರಿಗಳಿಗೆ ಸುಸಜ್ಜಿತ ಬೃಹತ್ ಸಂಕೀರ್ಣ ಎಂದ ಸಚಿವ

ಬೆಂಗಳೂರು: ಯಶವಂತಪುರದಲ್ಲಿ ಇರುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ಆವರಣದಲ್ಲಿ ಸರ್ಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ (MB Patil) ಹೇಳಿದರು.

100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (KSDL) ಸಿಬ್ಬಂದಿ ವರ್ಗಕ್ಕೆ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಆವರಣದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಕಚೇರಿಗಳಿಗೆ ಸ್ಥಳಾವಕಾಶ ಕೊಡಲಾಗಿದೆ. ಅದೇ ಮಾದರಿಯನ್ನೂ ಕೆಎಸ್‌ಡಿಎಲ್‌ನಲ್ಲೂ ಅಳವಡಿಸಿಕೊಳ್ಳಲಾಗುವುದು. ಕೆಎಸ್‌ಡಿಎಲ್ ವತಿಯಿಂದಲೇ ಹಂತಹಂತವಾಗಿ ಇದನ್ನು ನಿರ್ಮಿಸಲಾಗುವುದು. ಇದರಿಂದ ಸಂಸ್ಥೆಯು ಆರ್ಥಿಕ ಸ್ವಾವಲಂಬನೆ ಸಾಧಿಸುವುದು ಸುಲಭವಾಗಲಿದೆ ಎಂದು ನುಡಿದರು.

5,000 ಕೋಟಿ ರೂ. ವಹಿವಾಟಿನ ಗುರಿ:
ಮೈಸೂರು ಮಹಾರಾಜರು ಮತ್ತು ಸರ್ ಎಂ.ವಿಶ್ವೇಶ್ವರಯ್ಯನವರು ಸ್ಥಾಪಿಸಿದ ಕೆಎಸ್‌ಡಿಎಲ್ ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು. ವಿದೇಶಗಳಲ್ಲೂ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ಬೀಡಲಾಗುತ್ತಿದ್ದು, ಯೂರೋಪ್ ಮತ್ತು ಅರಬ್ ರಾಷ್ಟ್ರಗಳಿಗೆ ಕೆಎಸ್‌ಡಿಎಲ್‌ ಉತ್ಪನ್ನಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ರಫ್ತು ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಕೆಎಸ್‌ಡಿಎಲ್‌ ಆವರಣದಲ್ಲಿ ದಿನನಿತ್ಯದ ದಿನಸಿ ಪದಾರ್ಥಗಳು, ಡೆಟಾಲ್, ಹ್ಯಾಂಡ್ ಸೋಪ್ ಮುಂತಾದವೆಲ್ಲ ಲಭ್ಯವಾಗಬೇಕು. ಸದ್ಯಕ್ಕೆ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆ ವಿತರಣೆ ಚೆನ್ನಾಗಿ ನಡೆಯುತ್ತಿದೆ. ಸಂಸ್ಥೆಯು ಕಾರ್ಮಿಕರ ಯೋಗಕ್ಷೇಮಕ್ಕೂ ಆದ್ಯತೆ ನೀಡುವ ಉತ್ತರದಾಯಿತ್ವವನ್ನು ಪ್ರದರ್ಶಿಸಿದೆ ಎಂದು ಹೇಳಿದರು.

ಎಂಎಸ್ಐಎಲ್‌ಗೆ ಮತ್ತಷ್ಟು ಬಲ: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ನಡೆಸುವ ವಹಿವಾಟನ್ನು ವಿಸ್ತರಿಸಲು ನಿರ್ಧರಿಸಲಾಗಿದ್ದು, ಕೇರಳ ಮಾದರಿಯಲ್ಲಿ ಚಿಟ್ ಫಂಡ್ ನಡೆಸಲಾಗುವುದು. ಇದರ ಮೂಲಕ ವಾರ್ಷಿಕ 10,000 ಕೋಟಿ ರೂ. ವ್ಯವಹಾರ ಬೆಳೆಸಲಾಗುವುದು. ಇದರಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಂಡು, ಖಾಸಗಿಯವರಿಗೆ ಆರೋಗ್ಯಕರ ಸ್ಪರ್ಧೆ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಎಂಎಸ್ಐಎಲ್‌ನ 200 ಮದ್ಯ ಮಾರಾಟ ಪ್ರೀಮಿಯಂ ಬೋಟಿಕ್‌ಗಳನ್ನು ಆರಂಭಿಸಲಾಗುತ್ತಿದೆ. ಇತ್ತೀಚೆಗೆ ಬಸವೇಶ್ವರ ನಗರದಲ್ಲಿ ಹೊಸವರ್ಷ ದಿನ ಆರಂಭಿಸಿದ್ದು ಅಲ್ಲಿ‌ 30-40ರಷ್ಟು ವಹಿವಾಟು ಹೆಚ್ಚಾಗಿದೆ. ಯಾವ ಖಾಸಗಿ ಬೋಟಿಕ್‌ಗಳಿಗೂ ಕಡಿಮೆ‌ ಇಲ್ಲದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಇದೇ ರೀತಿಯಲ್ಲಿ ಲೇಖಕ್ ನೋಟ್ ಪುಸ್ತಕಗಳ ಗುಣಮಟ್ಟವನ್ನೂ ಹೆಚ್ಚಿಸಲಾಗುವುದು. ಒಟ್ಟಿನಲ್ಲಿ ಸರ್ಕಾರಿ ಉದ್ದಿಮೆಗಳಿಗೆ ಕಾರ್ಪೊರೇಟ್ ಸ್ಪರ್ಶ ನೀಡಿ, ಲಾಭದ ಹಳಿಗೆ ತರಲಾಗುವುದು ಎಂದು ಸಚಿವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಕೆಎಸ್‌ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಪ್ರಧಾನ ವ್ಯವಸ್ಥಾಪಕ (ಆಡಳಿತ) ಗಂಗಪ್ಪ, ಮಲ್ಲಿಗೆ ಆಸ್ಪತ್ರೆ ಸಿಇಒ ಡಾ.ಶ್ರೀನಿವಾಸ, ಕೈಗಾರಿಕಾ ಇಲಾಖೆಯ ಮಹಾಂತೇಶ ಬಿರಾದರ ಇದ್ದರು.

ಆರೋಗ್ಯ ಶಿಬಿರ, ಹೆಲ್ತ್ ಕಾರ್ಡ್ ವಿತರಣೆ: ಕೆಎಸ್‌ಡಿಎಲ್‌ ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು 5 ಲಕ್ಷ ರೂಪಾಯಿ ಮೊತ್ತದ ಚಿಕ್ಸಿತೆ ಪಡೆಯಬಹುದಾದ ಹೆಲ್ತ್ ಕಾರ್ಡ್ ಅನ್ನು ಸಚಿವ ಎಂ.ಬಿ.ಪಾಟೀಲ ವಿತರಿಸಿದರು. 169 ಕಾಯಂ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರದ ಮೇಲೆ ಕೆಲಸ‌‌ ಮಾಡುತ್ತಿರುವ 464 ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಈ ವಿಮಾ ಸೌಲಭ್ಯ ಅನ್ವಯ ಆಗುತ್ತದೆ. ಮಲ್ಲಿಗೆ ಆಸ್ಪತ್ರೆ ಜೊತೆಗೂ ಕೆಎಸ್‌ಡಿಎಲ್‌ ಒಪ್ಪಂದ ಮಾಡಿಕೊಂಡಿದ್ದು, ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ವಿವರಿಸಿದರು.

ಪ್ರತಿಷ್ಠಿತ ಕೆಎಸ್‌ಡಿಎಲ್‌ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿ ಅಲ್ಲಿ ಸಾಬೂನು ಉತ್ಪಾದನೆಯನ್ನು ಪರಿಶೀಲಿಸಿದ ಕಾರ್ಖಾನೆ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಸೇರಿದಂತೆ ಇತರ ಸಿಬ್ಬಂದಿ ವರ್ಗ ಇದ್ದರು.

TAGGED:bengaluruKSDLMB PatilMSILಎಂ.ಬಿ.ಪಾಟೀಲ್ಕೆಎಸ್‌ಡಿಎಲ್‌ಬೆಂಗಳೂರುವಿಮೆ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವವನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
15 minutes ago
Chikkamagaluru Funeral
Chikkamagaluru

ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
22 minutes ago
Siddaramaiah 5
Districts

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ

Public TV
By Public TV
26 minutes ago
Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
55 minutes ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?