ಬೆಂಗಳೂರು: ನಗರ-ಪಟ್ಟಣ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅನಧಿಕೃತ ನಿವೇಶನಗಳಿಗೆ, ಮನೆಗಳಿಗೆ ಒಂದು ಬಾರಿ `ಬಿ’ ಖಾತೆ ಮಾಡಿಕೊಡುವ ನಿರ್ಧಾರ ಐತಿಹಾಸಿಕ ನಿರ್ಧಾರ ಎಂದು ಸಚಿವ ರಹೀಂಖಾನ್ (Rahim Khan), ಸಚಿವ ಬೈರತಿ ಸುರೇಶ್ (Byrathi Suresh) ಬಣ್ಣಿಸಿದರು.ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ ತನಿಖೆ ಮಾಡಿ: ನಾಗರಾಜ್ ಯಾದವ್
Advertisement
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಬೈರತಿ ಸುರೇಶ್, ರಾಜ್ಯದಲ್ಲಿ ನಗರ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ 55 ಲಕ್ಷ ಮನೆಗಳಿಗೆ ಬಿ ಖಾತೆಗಳೇ ಇರಲಿಲ್ಲ. ಹೀಗಾಗಿ ನಮ್ಮ ಸರ್ಕಾರ `ಬಿ’ ಖಾತೆ ಕೊಡುವ ಕೆಲಸ ಮಾಡ್ತಿದೆ. ಈ ನಿಯಮದಿಂದ ಮಾಲೀಕನಿಗೆ ದಾಖಲಾತಿ ಸಿಗಲಿದೆ. ಸರ್ಕಾರಕ್ಕೆ ಟ್ಯಾಕ್ಸ್ ಬರುತ್ತದೆ. ನಮ್ಮ ನಿರ್ಧಾರದಿಂದ ಸಾರ್ವಜನಿಕರು ಖುಷಿಯಾಗಿದ್ದಾರೆ. ಇದು ನಮ್ಮ ಸರ್ಕಾರದ ಐತಿಹಾಸಿಕ ನಿರ್ಧಾರ ಎಂದರು.
Advertisement
ಬಳಿಕ ಮಾತನಾಡಿದ ಸಚಿವ ರಹೀಂಖಾನ್, ನಗರ-ಪಟ್ಟಣ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅನಧಿಕೃತ ನಿವೇಶನಗಳಿಗೆ, ಮನೆಗಳಿಗೆ ಒಂದು ಬಾರಿ `ಬಿ’ ಖಾತೆ ಮಾಡಿಕೊಡುವ ಪ್ರಕ್ರಿಯೆ ಶುರುವಾಗಿದೆ. ಇದು ನಮ್ಮ ಸರ್ಕಾರದ ಐತಿಹಾಸಿಕ ನಿರ್ಧಾರ. 40 ವರ್ಷಗಳಿಂದ ದಾಖಲಾತಿ ಇಲ್ಲದೆ ಜನರು ಕಣ್ಣೀರು ಹಾಕ್ತಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ನಿರ್ಣಯದಂತೆ ಬಿ-ಖಾತಾ ಮಾಡುವ ನಿರ್ಣಯ ಮಾಡಲಾಗಿದೆ. ಈಗಾಗಲೇ ಬಿ ಖಾತಾ ಪ್ರಕ್ರಿಯೆ ಶುರುವಾಗಿದೆ. ಸರ್ಕಾರದ ನಿಯಮದಿಂದ ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿರೋರಿಗೆ, ಮನೆ ಮಾಲೀಕನಿಗೆ ದಾಖಲಾತಿ ಸಿಗಲಿದೆ. ಇದು ನಮ್ಮ ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದರು.ಇದನ್ನೂ ಓದಿ: ವೇದವ್ಯಾಸ್ ಕಾಮತ್ ವಿರುದ್ಧ ಎಫ್ಐಆರ್ಗೆ ಬಿಜೆಪಿ ಖಂಡನೆ – ಸರ್ಕಾರಕ್ಕೆ ತೀವ್ರ ತರಾಟೆ
Advertisement
Advertisement