ಕಾಲು ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

Public TV
1 Min Read
anklet

ಜೈಪುರ್: ಬೆಳ್ಳಿ ಕಾಲು ಗೆಜ್ಜೆಗಾಗಿ ಮಹಿಳೆಯ ಕಾಲನ್ನು ಹಂತಕರು ಕತ್ತರಿಸಿ ಕಳ್ಳತನ ಮಾಡಿರುವ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಜಮ್ವಾ ರಾಮಗಢದಲ್ಲಿ ನಡೆದಿದೆ.

ಗೀತಾ ದೇವಿ ಶರ್ಮಾ(55) ಮೃತ ಮಹಿಳೆಯಾಗಿದ್ದಾಳೆ. ದರೋಡೆಕೋರರು ಆಕೆಯ ಕಾಲಿನಲ್ಲಿದ್ದ ಬೆಳ್ಳಿಯ ಗೆಜ್ಜೆಗಳನ್ನು ತೆಗೆಯಲಾಗದೆ ಪಾದಗಳನ್ನೇ ಕತ್ತರಿಸಿದ್ದಾರೆ. ಕಳ್ಳರು ಮನೆಯಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿಕೊಂಡು ಓಡಿಹೋಗುವ ಮುನ್ನ ಮನೆಯ ಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕೊಂದು ಆಕೆಯ ಸರ, ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ.

anklet 1

ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು, ಹಣವನ್ನು ಬಾಚಿಕೊಂಡಿದ್ದಾರೆ. ನಂತರ ಶಬ್ದ ಕೇಳಿ ಮನೆಯತ್ತ ಬರುತ್ತಿದ್ದ ಆಕೆ ಮೇಲೆ ಹೊಲದಲ್ಲೇ ದಾಳಿ ಮಾಡಿದ ದರೋಡೆಕೋರರು ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಿತ್ತುಕೊಂಡಿದ್ದಾರೆ. ನಂತರ ಆಕೆಯನ್ನು ಕೊಲೆ ಮಾಡಿ ಓಡಿಹೋಗುವಾಗ ಕೆಳಗೆ ಬಿದ್ದಿದ್ದ ಆಕೆಯ ಕಾಲಿನಲ್ಲಿದ್ದ ಬೆಳ್ಳಿ ಗೆಜ್ಜೆ ಅವರ ಕಣ್ಣಿಗೆ ಬಿದ್ದಿದೆ. ಹೀಗಾಗಿ ಮಹಿಳೆಯ ಕಾಲು ಕತ್ತರಿಸಿ ಗೆಜ್ಜೆಯನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

FotoJet 5 12

ಸಂತ್ರಸ್ತೆಯ ಕುಟುಂಬವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೋರಿದೆ. ಹಾಗೇ ರಾಜಸ್ಥಾನ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ಕೋರಿದೆ. ನನ್ನ ತಾಯಿ ಇಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಯಾರು ದಾಳಿ ಮಾಡಿದರು ಎಂದು ನಮಗೆ ತಿಳಿದಿಲ್ಲ. ತನಿಖೆಗಳ ಬಗ್ಗೆ ಪೊಲೀಸರು ನಮಗೆ ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ.

Share This Article
Leave a Comment

Leave a Reply

Your email address will not be published. Required fields are marked *