ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ(Corona) ಪ್ರಕರಣಗಳ ಏರಿಳಿತ ಮುಂದುವರಿದಿದೆ. ಇಂದು ರಾಜ್ಯದಲ್ಲಿ ಒಟ್ಟು 589 ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು ನಿನ್ನೆಗಿಂತ ಸ್ವಲ್ಪ ಕಡಿಮೆ ಎನಿಸಿಕೊಂಡಿದೆ. ರಾಜ್ಯದಲ್ಲಿ ಇಂದು 1 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಇಂದು 478 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 4,379 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರದಲ್ಲಿ ಇಂದು 299 ಕೇಸ್ ದಾಖಲಾಗಿದೆ. ಮೈಸೂರಿನಲ್ಲಿ ದಾಖಲಾದ 46 ಕೇಸ್ ಜಿಲ್ಲೆಗಳ ಪೈಕಿ ದಾಖಲಾದ ಹೆಚ್ಚಿನ ಪ್ರಕರಣವಾಗಿದೆ. ಇಂದು ಬಳ್ಳಾರಿಯಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಸೇರಿ ಈವರೆಗೆ ಒಟ್ಟು 40,216 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ.
ಈವರೆಗೆ ರಾಜ್ಯದಲ್ಲಿ ಒಟ್ಟು 40,58,178 ಮಂದಿಗೆ ಕೊರೊನಾ ಬಂದಿದೆ. ಒಟ್ಟು 40,13,541 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 15,519 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 23,709 ಸ್ಯಾಂಪಲ್ (ಆರ್ಟಿ ಪಿಸಿಆರ್ 17,681 + 6,028 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಎನ್ಸಿಪಿ ಅಧ್ಯಕ್ಷರಾಗಿ ಶರದ್ ಪವಾರ್ ಮರು ಆಯ್ಕೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 299, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 20, ಚಿತ್ರದುರ್ಗ 0, ದಕ್ಷಿಣ ಕನ್ನಡ 16, ದಾವಣಗೆರೆ 1, ಧಾರವಾಡ 11, ಗದಗ 0, ಹಾಸನ 21, ಹಾವೇರಿ 3, ಕಲಬುರಗಿ 6, ಕೊಡಗು 37, ಕೋಲಾರ 10, ಕೊಪ್ಪಳ 1, ಮಂಡ್ಯ 5, ಮೈಸೂರು 46, ರಾಯಚೂರು 7, ರಾಮನಗರ 17, ಶಿವಮೊಗ್ಗ 22, ತುಮಕೂರು 8, ಉಡುಪಿ 10, ಉತ್ತರ ಕನ್ನಡ 15, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲಂಕಾ ಆರ್ಥಿಕ ಬಿಕ್ಕಟ್ಟು – ಶಾಲೆಗಳ ಪಠ್ಯಪುಸ್ತಕ ಮುದ್ರಣಕ್ಕೆ ಭಾರತದಿಂದ ಭಾರೀ ನೆರವು