Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಕರ್ನಾಟಕದ 590 ವಿದ್ಯಾರ್ಥಿಗಳು ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಕರ್ನಾಟಕದ 590 ವಿದ್ಯಾರ್ಥಿಗಳು ಆಯ್ಕೆ

Bengaluru City

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಕರ್ನಾಟಕದ 590 ವಿದ್ಯಾರ್ಥಿಗಳು ಆಯ್ಕೆ

Public TV
Last updated: December 29, 2024 10:40 am
Public TV
Share
3 Min Read
reliance foundation scholarships
SHARE

ಮುಂಬೈ: ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರ ಪಟ್ಟಿಯನ್ನು ರಿಲಯನ್ಸ್ ಫೌಂಡೇಷನ್‌ (Reliance Foundation) ಘೋಷಣೆ ಮಾಡಿದೆ.

2024-25ನೇ ಸಾಲಿನ, ಭಾರತದಾದ್ಯಂತ ಐದು ಸಾವಿರ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಭಾರತದ ಭವಿಷ್ಯವನ್ನು ರೂಪಿಸುವುದಕ್ಕೆ ಸಬಲಗೊಳಿಸಬೇಕು, ಯುವ ಪ್ರತಿಭಾವಂತರನ್ನು ಉತ್ತೇಜಿಸಬೇಕು ಎಂಬ ಉದ್ದೇಶದಿಂದ ರಿಲಯನ್ಸ್ ಫೌಂಡೇಷನ್ ಇಂಥದ್ದೊಂದು ಕಾರ್ಯಕ್ರಮವನ್ನು ರೂಪಿಸಿದೆ. ಈ ವಿದ್ಯಾರ್ಥಿ ವೇತನಕ್ಕಾಗಿ ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ, ವಿವಿಧ ಹಿನ್ನೆಲೆಯ ಒಂದು ಲಕ್ಷ ಸಂಖ್ಯೆಯ ಪ್ರಥಮ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬೆಂಗಳೂರಿನ 1ಎಂಜಿ ಮಾಲ್‌ನಲ್ಲಿ ರಿಲಯನ್ಸ್‌ನ ಫ್ರೆಶ್‌ಪಿಕ್ ಮಳಿಗೆ

mukesh nita ambani e1622714132333

ಆಯ್ಕೆಯಾದ ವಿದ್ಯಾರ್ಥಿಗಳು ವಿವಿಧ ಹಿನ್ನೆಲೆಯ ಹಾಗೂ ಶೈಕ್ಷಣಿಕ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ಹಣಕಾಸಿನ ನೆರವು, ಮಾರ್ಗದರ್ಶನ ಮತ್ತು ಸರ್ವತೋಮುಖ ಬೆಳವಣಿಗೆಯ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ. ಇದರಲ್ಲಿ ಉಲ್ಲೇಖಿಸಲೇ ಬೇಕಾದ ಸಂಗತಿ ಏನೆಂದರೆ, 1300ರಲ್ಲಿ 670 ಸಂಸ್ಥೆಗಳು ಹಾಗೂ 5000 ವಿದ್ಯಾರ್ಥಿಗಳ ಪೈಕಿ 590 ಮಂದಿ ಕರ್ನಾಟಕಕ್ಕೆ ಸೇರಿರುವುದು. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಸಿಂಹಪಾಲು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಇನ್ನು ಒಟ್ಟಾರೆಯಾಗಿ ನೋಡಿದರೆ, ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವುದರಲ್ಲಿ ಶೇಕಡಾ 70ರಷ್ಟು ಕುಟುಂಬಗಳ ವಾರ್ಷಿಕ ಆದಾಯವು 2.50 ಲಕ್ಷ ರೂಪಾಯಿಗಿಂತ ಕಡಿಮೆ ಇದೆ.

ಈ ಸ್ಕಾಲರ್‌ಷಿಪ್ ವಿದ್ಯಾರ್ಥಿಯ ಬೋಧನಾ ಶುಲ್ಕ (ಟ್ಯೂಷನ್ ಫೀ), ಹಾಸ್ಟೆಲ್ ವೆಚ್ಚ ಮತ್ತು ಇತರ ಶೈಕ್ಷಣಿಕ ಶುಲ್ಕವನ್ನು ಭರಿಸುತ್ತದೆ. ಆ ಮೂಲಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕವಾದ ಸಮಸ್ಯೆಗಳ ಕಡೆಗೆ ಆಲೋಚನೆ ಮಾಡುವ ಅಗತ್ಯವಿಲ್ಲದೆ ಓದಿನ ಕಡೆಗೆ ಗಮನ ಕೊಡಬಹುದಾಗಿರುತ್ತದೆ. ಹಣಕಾಸಿನ ನೆರವು ಮಾತ್ರವಲ್ಲದೆ, ಈ ವಿದ್ಯಾರ್ಥಿಗಳಿಗೆ ಸಮಗ್ರವಾದ ಬೆಂಬಲ, ಮಾರ್ಗದರ್ಶನ, ವೃತ್ತಿಪರವಾದ ಬೆಳವಣಿಗೆಗೆ ಅವಕಾಶಗಳನ್ನು ಒದಗಿಸಿಕೊಡಲಾಗುವುದು. ಇದನ್ನೂ ಓದಿ: ಡೇಟಾ ಟ್ರಾಫಿಕ್‌- ಚೀನಾ ಕಂಪನಿ ಹಿಂದಿಕ್ಕಿದ ರಿಲಯನ್ಸ್‌

Reliance Foundation 3

ರಿಲಯನ್ಸ್ ವಕ್ತಾರರು ಈ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಈ ಅಸಾಧಾರಣ ಯುವ ಮನಸ್ಸುಗಳನ್ನು ಗುರುತಿಸಲು ಮತ್ತು ಬೆಂಬಲಿಸಲು ನಾವು ಸಂತೋಷಪಡುತ್ತೇವೆ. ಪ್ರತಿಷ್ಠಿತ ರಿಲಯನ್ಸ್ ಫೌಂಡೇಷನ್ ಪದವಿ ಹಂತದ ಸ್ಕಾಲರ್‌ಷಿಪ್‌ಗಳ ಮೂಲಕವಾಗಿ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಬಳಸುವುದಕ್ಕೆ ಮತ್ತು ಭಾರತದ ಬೆಳವಣಿಗೆಗೆ ಗಮನಾರ್ಹ ಕೊಡುಗೆಗಳನ್ನು ನೀಡಲು ಸಶಕ್ತಗೊಳಿಸುವ ಗುರಿಯನ್ನು ಹೊಂದಿದೆ.ಈ ವರ್ಷ ನಾವು ಸುಮಾರು ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಆಯ್ಕೆಯಾದವರು ದೇಶದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಶಿಕ್ಷಣವು ಅವಕಾಶಗಳನ್ನು ತೆರೆಯುವಂಥ ಕೀಲಿಯಾಗಿದೆ. ಈ ವಿದ್ಯಾರ್ಥಿಗಳ ಪರಿವರ್ತನೆಯ ಪ್ರಯಾಣದ ಭಾಗವಾಗಿರುವುದಕ್ಕೆ ನಾವು ಹೆಮ್ಮೆಪಡುತ್ತೇವೆ ಎಂದು ಹೇಳಿದ್ದಾರೆ.

ಫಲಿತಾಂಶ ಪರಿಶೀಲಿಸುವುದು ಹೇಗೆ?
ಸ್ಕಾಲಶಿಪ್‌ಗಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು https://reliancefoundation.org/ug-scholarships-2024-25-results ವೆಬ್‌ಸೈಗೆ ಭೇಟಿ ನೀಡಬೇಕು. ಅದರಲ್ಲಿ 2024-25ನೇ ಸಾಲಿನ ವಿದ್ಯಾರ್ಥಿವೇತನಕ್ಕಾಗಿ https://scholarships.reliancefoundation.org/UGScholarship_ApplicationStatus.aspx ಮೀಸಲಾದ ಪುಟಕ್ಕೆ ತೆರಳಿ, 17 ಅಂಕಿಯ ಅರ್ಜಿ ಸಂಖ್ಯೆಯನ್ನು ಅಥವಾ ನೋಂದಾಯಿತ ಇ-ಮೇಲ್ ಐಡಿ ನಮೂದಿಸಬೇಕು. ಆ ನಂತರ ಸಲ್ಲಿಸು (ಸಬ್ ಮಿಟ್) ಎಂಬ ಆಯ್ಕೆ ಇರುವ ಬಟನ್ ಒತ್ತುವ ಮೂಲಕವಾಗಿ ಫಲಿತಾಂಶವನ್ನು ನೋಡಬಹುದು. ಅರ್ಜಿಯ ಸ್ಥಿತಿಯು ‘Shortlisted’, ‘Waitlisted’ ಮತ್ತು ‘Not Shortlisted’ ಹೀಗೆ ಮೂರು ವಿಭಾಗಗಳಲ್ಲಿ ಇರುತ್ತದೆ. ಇದನ್ನೂ ಓದಿ: ಚೆನ್ನೈ ರಿಲಯನ್ಸ್‌ ಕ್ಯಾಂಪಸ್‌ನಲ್ಲಿ ಫೇಸ್‌ಬುಕ್‌ ಡೇಟಾ ಸೆಂಟರ್‌!

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ಲಕ್ಷ ರೂಪಾಯಿ ತನಕ ವಿದ್ಯಾರ್ಥಿ ವೇತನ ದೊರೆಯುತ್ತದೆ. 1996ನೇ ಇಸವಿಯಲ್ಲಿ ಆರಂಭವಾದ ಈ ಕಾರ್ಯಕ್ರಮವು 2020ರ ಹೊತ್ತಿಗೆ ಭಾರತದಾದ್ಯಂತ 28,000 ವಿದ್ಯಾರ್ಥಿಗಳನ್ನು ತಲುಪಿತ್ತು. 2022ರ ಡಿಸೆಂಬರ್‌ನಲ್ಲಿ ರಿಲಯನ್ಸ್ ಸ್ಥಾಪಕರಾದ ಧೀರೂಭಾಯಿ ಅಂಬಾನಿ ಅವರ ತೊಂಬತ್ತನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ, ‘ಮುಂದಿನ ಹತ್ತು ವರ್ಷಗಳಲ್ಲಿ ಇನ್ನೂ ಐವತ್ತು ಸಾವಿರ ಸ್ಕಾಲರ್‌ಶಿಪ್‌ಗಳನ್ನು ನೀಡುತ್ತೇವೆ ಎಂದು ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಹಾಗೂ ಮುಖ್ಯಸ್ಥೆಯಾದ ನೀತಾ ಅಂಬಾನಿ ಘೋಷಣೆ ಮಾಡಿದರು. ಆ ನಂತರದಲ್ಲಿ ಪ್ರತಿ ವರ್ಷ 5,100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

TAGGED:Nita AmbaniReliance Foundationscholarshipನೀತಾ ಅಂಬಾನಿರಿಲಯನ್ಸ್‌ ಫೌಂಡೇಷನ್‌ಸ್ಕಾಲರ್‌ಶಿಪ್‌
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
26 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
53 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
1 hour ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?