Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ

Latest

ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ

Public TV
Last updated: August 6, 2025 3:14 pm
Public TV
Share
3 Min Read
Uttarkashi Cloudburst 2 1
SHARE

– ಕೇಂದ್ರದಿಂದ ಅಗತ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಮೋದಿ ಭರವಸೆ
– ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ; 150 ಮಂದಿ ಸ್ಥಳಾಂತರ

ಡೆಹ್ರಾಡೂನ್‌: ಉತ್ತರಕಾಶಿಯ ಧರಾಲೀಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ (Uttarkashi Cloudburst) ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವನ್ನ ಭಾರತೀಯ ಸೇನೆ (Indian Army), ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಆರಂಭಿಸಿವೆ. ಭಾರೀ ಮಳೆಯ ನಡುವೆಯೂ 150 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 150ಕ್ಕೂ ಹೆಚ್ಚುಮಂದಿಯನ್ನು ಪ್ರವಾಹಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ.

ಅಲ್ಲದೇ ಪ್ರವಾಹದಿಂದಾಗಿ ಈವರೆಗೆ ಐವರು ಸಾವನ್ನಪ್ಪಿರುವುದು ದೃಢವಾಗಿದೆ. ಐವರ ಮೃಹದೇಹಗಳನ್ನೂ ಹೊರತೆಗೆಯಲಾಗಿದೆ. ಕೇರಳದ 28 ಪ್ರವಾಸಿಗರೂ ಸೇರಿ 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

उत्तरकाशी में आपदा प्रभावित क्षेत्र का हवाई निरीक्षण किया।#Uttarkashi pic.twitter.com/IFnrxRkegD

— Pushkar Singh Dhami (@pushkardhami) August 6, 2025

ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
ಇನ್ನೂ ಮೇಘಸ್ಫೋಟದಿಂದ ಪ್ರವಾಹ ಸಂಭವಿಸಿದ ಸ್ಥಳವನ್ನ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ (Pushkar Singh Dhami) ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಕೂಡ ಹಂಚಿಕೊಂಡಿದ್ದು, ಸಮರೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನ ಕೈಗೊಳ್ಳಲಾಗುತ್ತಿದೆ. ಸಂತ್ರಸ್ತರಿಗೆ ತ್ವರಿತ ಸಹಾಯವನ್ನೂ ನೀಡುತ್ತಿದ್ದೇವೆ ಎಂದು ಪುಷ್ಕರ್‌ ಸಿಂಗ್‌ ಧಾಮಿ ತಿಳಿಸಿದ್ದಾರೆ.  ಇದನ್ನೂ ಓದಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

ಪ್ರಧಾನಿ ಮೋದಿ ಜೊತೆಗೆ ಮಾತುಕತೆ
ಈ ನಡುವೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಧರಾಲಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ವಿಪತ್ತು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮಾಹಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರವು ಸಂಪೂರ್ಣ ಸಿದ್ಧತೆಯೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ, ನಿರಂತರ ಭಾರೀ ಮಳೆಯಿಂದಾಗಿ, ಕೆಲವು ಪ್ರದೇಶಗಳಲ್ಲಿ ತೊಂದರೆಗಳಿವೆ ಎಲ್ಲಾ ಸಂಬಂಧಪಟ್ಟ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಇದರಿಂದ ಸಂತ್ರಸ್ತರಿಗೆ ತ್ವರಿತ ಸಹಾಯ ಸಿಗುತ್ತದೆ ಎಂದು ಮೋದಿ ಅವರಿಗೆ ಧಾಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ.

Modi 3

ಉತ್ತರಾಖಂಡ ಬಿಜೆಪಿ ಸಂಸದರಿಂದ ಮೋದಿ ಭೇಟಿ
ಈ ಎಲ್ಲ ಬೆಳವಣಿಗೆಗಳ ನಡುವೆ ಉತ್ತರಾಖಂಡದ ಬಿಜೆಪಿ ಸಂಸದರನ್ನು (Uttarakhand BJP MPs) ಭೇಟಿಯಾದ ಪ್ರಧಾನಿ ಮೋದಿ, ಉತ್ತರಕಾಶಿ ಉಂಟಾದ ಮೇಘಸ್ಫೋಟ ಘಟನೆ ಕುರಿತು ಚರ್ಚಿಸಿದ್ದಾರೆ. ಉತ್ತರಾಖಂಡದ ಸಂಸದರಾದ ಅಜಯ್ ಭಟ್, ಮಾಲಾ ರಾಜ್ಯ ಲಕ್ಷ್ಮಿ ಶಾ, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಅನಿಲ್ ಬಲುನಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.  ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

Uttarkashi Cloudburst

100ಕ್ಕೂ ಅಧಿಕ ಮಂದಿ ಮಿಸ್ಸಿಂಗ್‌
ಇನ್ನೂ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ನೈಸರ್ಗಿಕ ವಿಕೋಪಕ್ಕೆ ಸಿಲುಕಿದ್ದು, ಭಾರೀ ಮೇಘಸ್ಫೋಟದಿಂದ ವಿನಾಶವೇ ಸೃಷ್ಟಿಯಾಗಿದೆ. ಧರಾಲಿ ಗ್ರಾಮದ ಬಳಿಯಿರುವ ಖೀರ್ ಗಡ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ಹಠಾತ್ ನೀರಿನ ಹರಿವು ಹೆಚ್ಚಾದ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ರೌದ್ರಾವತಾರ ತಾಳಿ ಹರಿದು ಬಂದ ಭಾರೀ ಪ್ರಮಾಣದ ಕಪ್ಪು ಬಣ್ಣದ ನೀರಿನಿಂದ 25ಕ್ಕೂ ಹೆಚ್ಚು ಹೋಟೆಲ್, ಹೋಂಸ್ಟೇಗಳು ಕೊಚ್ಚಿಹೋಗಿವೆ. ಘಟನೆಯಲ್ಲಿ ಸುಮಾರು ಹತ್ತು ಮಂದಿ ಮೃತಪಟ್ಟಿದ್ದು, ನೂರಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ.  ಇದನ್ನೂ ಓದಿ: ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Uttarkashi Cloudburst 2

ಈ ಪ್ರದೇಶಗಳಲ್ಲಿ ನಾಪತ್ತೆಯಾದವರ ರಕ್ಷಣಾ ಕಾರ್ಯ ಆರಂಭವಾಗಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಐಟಿಬಿಪಿ ಮತ್ತು ಸ್ಥಳೀಯ ಆಡಳಿತದ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಇದುವರೆಗೆ 150 ಜನರನ್ನ ರಕ್ಷಿಸಲಾಗಿದೆ. ಸುಮಾರು 150 ಜನರನ್ನ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.

TAGGED:heavy rainIMDindian armynarendra modiPushkar Singh DhamiUttarakhandUttarkashi Cloudburstಉತ್ತರ ಕಾಶಿನರೇಂದ್ರ ಮೋದಿಪುಷ್ಕರ್ ಸಿಂಗ್ ಧಾಮಿಮೇಘಸ್ಫೋಟ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
43 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?