ಗದಗ: ಐತಿಹಾಸಿಕ ಸ್ಥಳ ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ (Lakkundi) 5ನೇ ದಿನದ ಉತ್ಖನನ (Excavation) ಕಾರ್ಯ ಮುಂದುವರೆದಿದೆ. ಭೂಮಿ ಅಗೆದಂತೆಲ್ಲಾ ಅನೇಕ ಶಿಲಾಕೃತಿಗಳು, ಕುರುಹುಗಳು ಪತ್ತೆಯಾಗುತ್ತಿವೆ. ಒಡೆದ ಮಡಿಕೆ ಆಕೃತಿಯ ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಇನ್ನು ಐತಿಹಾಸಿಕ ದೇವಸ್ಥಾನವನ್ನು ಮನೆಯನ್ನಾಗಿಸಿಕೊಂಡು ನಾಲ್ಕೈದು ಕುಟುಂಬಗಳು, ನಾಲ್ಕೈದು ತಲೆಮಾರುಗಳಿಂದ ವಾಸ ಮಾಡುತ್ತಿವೆ. ಈಗ ಆ ಕುಟುಂಬಕ್ಕೆ ಆತಂಕ ಎದುರಾಗಿದೆ.
ಹೌದು, ಗದಗದ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಅಂಗಳದಲ್ಲಿ 5ನೇ ದಿನವೂ ಉತ್ಖನನ ಕಾರ್ಯ ಭರದಿಂದ ಸಾಗುತ್ತಿದೆ. 35 ಜನ ಕಾರ್ಮಿಕರಿಂದ ಉತ್ಖನನ ಕಾಮಗಾರಿ ನಡೆಯುತ್ತಿದೆ. ಉತ್ಖನನ ವೇಳೆ ಒಡೆದ ಮಡಿಕೆಯ ಅವಶೇಷ ಪತ್ತೆಯಾಗಿದೆ. ಇದನ್ನೂ ಓದಿ: Reality Check | 3,000ಕ್ಕೆ ಅಕ್ರಮ ಬಾಂಗ್ಲಾ ವಲಸಿಗನಿಗೆ ಆಧಾರ್ – ಶೆಡ್ಗಳಲ್ಲಿ ಟಿವಿ, ಫ್ರಿಡ್ಜ್, ಫ್ಯಾನ್, ಎಲ್ಲ ಸೌಲಭ್ಯ!
ಸಿಕ್ಕ ಒಡೆದ ಮಡಿಕೆ ಹಳೆಯ ಕಾಲದ್ದು ಎನ್ನಲಾಗಿದೆ. ಈ ಪ್ರಾಚ್ಯಾವಶೇಷವನ್ನು ತುಂಬಾ ನಾಜೂಕಿನಿಂದ ಸ್ವಚ್ಛಗೊಳಿಸಿ, ಅದನ್ನು ಹೊರ ತೆಗೆಯುವ ಕೆಲಸ ಸಿಬ್ಬಂದಿಗಳು ಮಾಡಿದರು. ಈ ಮಡಿಕೆ ಅವಶೇಷ ಯಾವ ಕಾಲದ್ದು, ಇದು ದವಸ ಧಾನ್ಯಗಳನ್ನು ಸಂಗ್ರಹಿಸುವ ಮಡಿಕೆನಾ? ಚಿನ್ನ, ಆಭರಣಗಳನ್ನು ಇರಿಸಿದ್ದ ಮಡಿಕೆಯಾ ಎಂಬ ಬಗ್ಗೆ ಕುತೂಕಲ ಮೂಡಿಸಿದೆ. ಈ ಮಡಿಕೆ ಒಳ ಭಾಗದ ಮಣ್ಣನ್ನು ಸಹ ಕಾರ್ಮಿಕರು ಪರಿಶೀಲನೆ ಮಾಡ್ತಿದ್ದಾರೆ. ಇದನ್ನೂ ಓದಿ: ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ: ಸಿದ್ದರಾಮಯ್ಯ

ದೇವಸ್ಥಾನದೊಳಗೆಯೇ ಮನೆ:
ಇನ್ನು ಲಕ್ಕುಂಡಿಯಲ್ಲಿ ಮನೆಯೊಳಗೊಂದು ಐತಿಹಾಸಿಕ ದೇವಸ್ಥಾನ ಪತ್ತೆಯಾಗಿದೆ. ಈ ದೇವಸ್ಥಾನ ಚಾಲುಕ್ಯರ ಕಾಲದ ಪುರಾತನ ಕಾಲದ್ದು ಎನ್ನಲಾಗುತ್ತಿದೆ. ಇದು ಹೊರಗೆ ನೋಡಿದ್ರೆ ಮನೆ ಆಕಾರದಲ್ಲಿದೆ. ಒಳಗೆ ಹೋದರೆ ಪುರಾತನ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ಚೌಕಿಮಠ ಎಂಬ ಐದು ಕುಟುಂಬಗಳು ನಾಲ್ಕೈದು ತಲೆಮಾರುಗಳಿಂದ ವಾಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಧಿಕಾರ ಯಾರಿಗೂ ಸುಲಭವಾಗಿ ಬರಲ್ಲ, ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ: ಡಿಕೆ ಸುರೇಶ್

ಈ ದೇವಸ್ಥಾನವೇ ಈ ಕುಟುಂಬಸ್ಥರಿಗೆ ಸೂರಾಗಿದೆ. ಈ ಆವರಣದಲ್ಲಿ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನವಿದೆ. ಇದು ಚಾಲುಕ್ಯರ ಕಾಲದ ಈಶ್ವರ ದೇವಸ್ಥಾನ ಎಂದು ಇತಿಹಾಸಕಾರರು ಹೇಳುತ್ತಿದ್ದಾರೆ. ಈ ದೇವಸ್ಥಾನ ಆವರಣದಲ್ಲಿ ಶರಣಯ್ಯ, ಶೇಖರಯ್ಯ, ಬಸಮ್ಮ, ಈರಯ್ಯ, ಕೊಟ್ರಯ್ಯ ಹಾಗೂ ಈರಮ್ಮ ಚೌಕಿಮಠ ಎಂಬ ಐದು ಕುಟುಂಬ ವಾಸ ಮಾಡುತ್ತಿವೆ. ಸರ್ಕಾರದಿಂದ ಸೂಕ್ತ ಪರಿಹಾರ ನೀಡಿದ್ರೆ ಬಿಟ್ಟುಕೊಡ್ತೀವಿ ಎಂದು ಚೌಕಿಮಠ ಕುಟುಂಬಸ್ಥರು ಹೇಳುತ್ತಿದ್ದಾರೆ. ದೇವಸ್ಥಾನವನ್ನು ಮನೆ ಮಾಡಿಕೊಂಡ ಕುಟುಂಬಸ್ಥರು ಈಗ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರ ಈ ದೇವಸ್ಥಾನವನ್ನು ವಶಕ್ಕೆ ಪಡೆದು ಜೀರ್ಣೋದ್ಧಾರ ಮಾಡುವ ಪ್ಲಾನ್ಗೆ ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಇಲ್ಲಿನ ಕುಟುಂಬ ಆತಂಕಕ್ಕೆ ಒಳಗಾಗಿದೆ. ಇದನ್ನೂ ಓದಿ: ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

