ಚಿಕ್ಕೋಡಿಯಲ್ಲಿ ಧಾರಾಕಾರ ಮಳೆಗೆ 6 ಸೇತುವೆಗಳು ಜಲಾವೃತ!

Public TV
1 Min Read
CKD KRISHNA RIVER COLLAGE

ಬೆಳಗಾವಿ: ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ದಿನದಿಂದ ದಿನಕ್ಕೆ ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗುತ್ತಿದೆ.

1,39,000 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ಅದರಲ್ಲಿ 1,28,000 ಕ್ಯೂಸೆಕ್ ನೀರನ್ನು ಹಿಪ್ಪರಗಿ ಜಲಾಶಯದ 16 ಗೇಟಗಳ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ. ಕೃಷ್ಣಾ ನದಿಯ ನೀರು ನದಿ ಪಾತ್ರ ಬಿಟ್ಟು ಹೊರ ಬರುತ್ತಿದೆ.

ಕೃಷ್ಣಾ, ದೂದ ಗಂಗಾ, ವೇದ ಗಂಗಾ ಹಾಗೂ ಪಂಚ ಗಂಗಾ ನದಿಗಳು ಉಕ್ಕಿ ಹರಿಯುತ್ತಿದ್ದು, ಕಲ್ಲೋಳ- ಯಡೂರು ಸೇತುವೆ ಪಕ್ಕದ ದೇವಸ್ಥಾನದ ಕೆಳ ಹಂತ ಜಲಾವೃತಗೊಂಡಿದೆ. ಕೃಷ್ಣಾ ಸೇರಿ ಉಪ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಒಟ್ಟು 6 ಸೇತುವೆಗಳು ಜಲಾವೃತಗೊಂಡಿದೆ.

CKD KRISHNA RIVER 3

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಲ್ಲೋಳ- ಯಡೂರು ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರು, ಅಕ್ಕೋಳ-ಸಿದ್ನಾಳ, ಜತ್ರಾಟ-ಭಿವಶಿ ಹಾಗೂ ದೂದ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ದತ್ತವಾಡ – ಮಲಿಕವಾಡ ಗ್ರಾಮಗಳ ಸೇತುವೆಗಳು ಜಲಾವೃತಗೊಂಡಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗ್ರಾಮಗಳ ಕೆಳ ಹಂತದ ಸೇತುವೆಗಳಗಿದ್ದು, 12 ಗ್ರಾಮದ ಜನರು ಪರ್ಯಾಯ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಅಲ್ಲದೇ ಹೆಚ್ಚುತ್ತಿರುವ ನೀರಿನ ಪ್ರಮಾಣ ನೋಡಿ ಕೃಷ್ಣಾ ನದಿ ತೀರದ ಜನರು ಆತಂಕಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *