ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವರ ಉಸ್ತುವಾರಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ಭಿನ್ನಮತ ಎದ್ದಿದ್ದು, 6 ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದ್ದಾರೆ.
ಮಾಜಿ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಧೋರಣೆಯನ್ನ ವಿರೋಧಿಸಿ ಲೋಕಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಕಾರ್ತಿಕ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಕೌಶಿಕ್, ಪ್ರಧಾನ ಕಾರ್ಯದರ್ಶಿ ಸಂದೀಪ್ ಸೇರಿ ಆರು ಮಂದಿ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಗೃಹ ಸಚಿವರಿಗೆ ಗೊತ್ತಿಲ್ಲದ್ದಂತೆ ಸಿಡಿಎ ಅಧ್ಯಕ್ಷ ಸ್ಥಾನವನ್ನು ಗಾಯತ್ರಿ ಶಾಂತೇಗೌಡ ಸಿಎಂ ಬಳಿ ಮಾಡಿಸಿಕೊಂಡು ಬಂದಿದ್ದಾರೆ. ಅಲ್ಲದೆ ನಗರಸಭೆಯ ನಾಲ್ವರು ನಾಮನಿರ್ದೇಶಕ ಸ್ಥಾನಕ್ಕೂ ತಮ್ಮ ಹಿಂಬಾಲಕರನ್ನೇ ನೇಮಿಸಿದ್ದಾರೆ. ಉಸ್ತುವಾರಿ ಸಚಿವರನ್ನೂ ಮೀರಿ ತಮ್ಮಿಚ್ಚೆಯಂತೆ ಗಾಯತ್ರಿ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿ ರಾಜೀನಾಮೆ ನೀಡಿದ್ದಾರೆ.