ಡೆಹ್ರಾಡೂನ್: ವಿಧಾನಸಭಾ ಚುನಾವಣೆಗೆ ಮುನ್ನ, ಉತ್ತರಾಖಂಡ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಹರಿದ್ವಾರದಲ್ಲಿ ದಾಳಿ ನಡೆಸಿದೆ. ಈ ವೇಳೆ 4,50,00,000 ರೂ. ಮೌಲ್ಯದ ಹಳೆಯ ಕರೆನ್ಸಿಯೊಂದಿಗೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಎಸ್ಟಿಎಫ್ ಅವ್ಯಾವಹಾರ ನಡೆಯದಂತೆ ಎಲ್ಲ ಪಕ್ಷದವರ ಮೇಲೆ ಕಣ್ಣಿಟ್ಟಿದೆ. ಈ ವೇಳೆ ಎಸ್ಟಿಎಫ್ ಅಧಿಕಾರಿಗಳು ಹರಿದ್ವಾರದಲ್ಲಿ ಹಳೆ ಕರೆನ್ಸಿ ಇರುವುದರ ಮಾಹಿತಿ ಮೇರೆಗೆ ದಾಳಿ ಮಾಡಿದ್ದು, 6 ಜನರು ಹಳೆ ನೋಟುಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್
ಎಸ್ಟಿಎಫ್ ಹಿರಿಯ ಪೊಲೀಸ್ ಅಧೀಕ್ಷಕ(ಎಸ್ಎಸ್ಪಿ) ಅಜಯ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ಹಳೆಯ ಕರೆನ್ಸಿಯೊಂದಿಗೆ ಸಿಕ್ಕಿಬಿದ್ದಿರುವ ಮೂವರು ಹರಿದ್ವಾರದವರು ಮತ್ತು ಉಳಿದವರು ಉತ್ತರ ಪ್ರದೇಶದವರಾಗಿದ್ದಾರೆ. ಪ್ರಸ್ತುತ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಹೆಚ್ಚು ಮಾಹಿತಿ ತಿಳಿದುಕೊಳ್ಳಲು ಹೆಚ್ಚಿನ ತನಿಖೆ ಸಹ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆ ಫೆಬ್ರವರಿ 14 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಪರಿಣಾಮ ಚುನಾವಣೆಗೆ ಪಕ್ಷಗಳು ಬಾರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ