ಬೆಂಗಳೂರು: ಮಹಾ ಶಿವಾರಾತ್ರಿ ಹಬ್ಬದ ದಿನದಂದೇ ಆರು ಅಡಿ ಉದ್ದದ ನಾಗರಹಾವು ಮನೆಯೊಂದರಲ್ಲಿ ಪ್ರತ್ಯಕ್ಷವಾಗಿ ಅಲ್ಲಿನ ನಿವಾಸಿಗಳು ಗಾಬರಿಗೊಂಡಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನಹಳ್ಳಿಯಲ್ಲಿ ನಡೆದಿದೆ.
ಸೋಮವಾರ ಸಂಜೆ ಐದು ಗಂಟೆಯ ಸುಮಾರಿಗೆ ಬನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಆರು ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿದ್ದು ಮನೆಯವರು ಹಾವನ್ನು ಕಂಡು ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಕೆಲ ಸಮಯ ಮನೆಯಲ್ಲಿದ್ದ ನಾಗರಹಾವು ಮನೆಯ ಹೊರಗೆ ಬಂದು ಬಿಲ ಸೇರಿಕೊಂಡು ಅಲ್ಲಿನ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಮಾಡಿತ್ತು.
ನಂತರ ಸ್ನೇಕ್ ಕಾರ್ತಿಕ್ ಗೆ ಕರೆ ಮಾಡಿದ ಗ್ರಾಮಸ್ಥರು ಸ್ಥಳಕ್ಕೆ ಬಂದ ಉರಗ ತಜ್ಞ ಕಾರ್ತಿಕ್ ನಾಗರ ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಇನ್ನು ಅಲ್ಲಿನ ಜನ ಹಬ್ಬದ ದಿನವೇ ಹಾವನ್ನು ಕಂಡು ಗಾಬರಿಯಾಗಿದ್ದು, ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವುದರಿಂದ ನಿಟ್ಟುಸಿರು ಬಿಟ್ಟಂತಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv