ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Polls) ಬಿಜೆಪಿ ಅಭ್ಯರ್ಥಿ ಪರವಾಗಿ ಮತದಾನ ಮಾಡಿದ ಹಿಮಾಚಲ ಪ್ರದೇಶದ (Himachal Pradesh) ಆರು ಕಾಂಗ್ರೆಸ್ (Congress) ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ಗುರುವಾರ ಘೋಷಿಸಿದ್ದಾರೆ.
ರಾಜಿಂದರ್ ರಾಣಾ, ಸುಧೀರ್ ಶರ್ಮಾ, ಇಂದರ್ ದತ್ ಲಖನ್ಪಾಲ್, ದೇವಿಂದರ್ ಕುಮಾರ್ ಭೂಟೂ, ರವಿ ಠಾಕೂರ್ ಮತ್ತು ಚೆತನ್ಯ ಶರ್ಮಾ ಅನರ್ಹಗೊಂಡ ಕಾಂಗ್ರೆಸ್ ಶಾಸಕರು. ಆರು ಶಾಸಕರ ನಡೆಯು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದೆ ಎಂದು ಸ್ಪೀಕರ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್
ಬಿಜೆಪಿ ಆಡಳಿತವಿರುವ ಹರಿಯಾಣದಲ್ಲಿ ಹಿಂದಿನ ರಾತ್ರಿ ತಂಗಿದ್ದ ಆರು ಶಾಸಕರು ನಿನ್ನೆ ವಿಧಾನಸಭೆಗೆ ಬಂದಾಗ ಅವರ ‘ಶೌರ್ಯ’ಕ್ಕೆ ಬಿಜೆಪಿ ಚಪ್ಪಾಳೆ ತಟ್ಟಿ ಅಭಿನಂದಿಸಿತ್ತು.
ಬುಧವಾರ ಸದನದಲ್ಲಿ ಹಣಕಾಸು ಮಸೂದೆಗೆ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷ ವಿಪ್ ಜಾರಿ ಮಾಡಿತ್ತು. ಅದನ್ನು ಧಿಕ್ಕರಿಸಿದ ಕಾರಣಕ್ಕಾಗಿ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಸ್ಪಷ್ಟನೆ ನೀಡಿದ್ದಾರೆ. ಸ್ಪೀಕರ್ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ ನಂತರ ವಿಧಾನಸಭೆ ರಾಜ್ಯ ಬಜೆಟ್ ಅನ್ನು ಅಂಗೀಕರಿಸಲಾಗಿತ್ತು. ಇದನ್ನೂ ಓದಿ: ತಡರಾತ್ರಿ ಭೀಕರ ರೈಲು ಅಪಘಾತ- ಇಬ್ಬರ ದುರ್ಮರಣ