Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಫ್‍ಐಆರ್ ನಲ್ಲಿ 4, ಎಸ್‍ಪಿ ಹೇಳ್ತಾರೆ 5, ಎಂಎಲ್‍ಸಿ ವರದಿಯಲ್ಲಿ 6: ದರ್ಶನ್ ಕಾರಲ್ಲಿ ಇದ್ದವರು ಎಷ್ಟು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಫ್‍ಐಆರ್ ನಲ್ಲಿ 4, ಎಸ್‍ಪಿ ಹೇಳ್ತಾರೆ 5, ಎಂಎಲ್‍ಸಿ ವರದಿಯಲ್ಲಿ 6: ದರ್ಶನ್ ಕಾರಲ್ಲಿ ಇದ್ದವರು ಎಷ್ಟು?

Cinema

ಎಫ್‍ಐಆರ್ ನಲ್ಲಿ 4, ಎಸ್‍ಪಿ ಹೇಳ್ತಾರೆ 5, ಎಂಎಲ್‍ಸಿ ವರದಿಯಲ್ಲಿ 6: ದರ್ಶನ್ ಕಾರಲ್ಲಿ ಇದ್ದವರು ಎಷ್ಟು?

Public TV
Last updated: September 26, 2018 1:10 pm
Public TV
Share
2 Min Read
mys darshan comissioner collage
SHARE

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಕಾರಿನಲ್ಲಿ 4ಕ್ಕಿಂತಲೂ ಹೆಚ್ಚಿನ ಮಂದಿ ಪ್ರಯಾಣಿಸುತ್ತಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

ಅಪಘಾತಕ್ಕೀಡಾದ ಕಾರಿನಲ್ಲಿ ನಾಲ್ಕಲ್ಲ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರು ಎಂದು ಸ್ಫೋಟಕ ಮಾಹಿತಿಯನ್ನು ಮೈಸೂರಿನ ನಗರ ಪೊಲೀಸ್ ಆಯುಕ್ತ ಡಾ.ಸುಬ್ರಮಣ್ಯೇಶ್ವರ ರಾವ್ ನೀಡಿದ್ದಾರೆ.

ದರ್ಶನ್ ಅವರ ಅಪಘಾತಕ್ಕೀಡಾದ ಕಾರಿನಲ್ಲಿ ನಾಲ್ಕು ಮಂದಿ ಅಲ್ಲ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರು. ಕಳೆದ ಎರಡು ದಿನಗಳಿಂದ ಕಾರಿನಲ್ಲಿದ್ದಿದ್ದು ನಾಲ್ವರೇ ಎಂದು ದರ್ಶನ್ ಆಪ್ತರು ಹೇಳುತ್ತಿದ್ದರು. ಆದರೆ ಈಗ ಪೊಲೀಸ್ ಆಯುಕ್ತರ ಅಧಿಕೃತ ಹೇಳಿಕೆ ಮೂಲಕ ಕಾರಿನಲ್ಲಿ ಹೆಚ್ಚು ಮಂದಿ ಇರುವುದು ಸ್ಪಷ್ಟವಾಗಿದೆ.

mys darshan commisssioner

ಪೊಲೀಸ್ ಎಫ್‍ಐಆರ್ ನಲ್ಲಿ ನಾಲ್ಕು ಮಂದಿ ಇದ್ದರೆ, ಆಯುಕ್ತರು ಐದು ಮಂದಿ ಕಾರಿನಲ್ಲಿ ಇದ್ದರು ಎಂದು ಹೇಳಿದ್ದಾರೆ. ಆದರೆ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮೆಡಿಕೋ ಲೀಗಲ್ ಕೇಸ್(ಎಂಎಲ್‍ಸಿ) ವರದಿ ಪ್ರಕಾರ ಕಾರಿನಲ್ಲಿ ಆರು ಮಂದಿ ಪ್ರಯಾಣಿಸಿದ್ದಾರೆ. ಸದ್ಯ ಅವರಲ್ಲಿ ನಾಲ್ವರು ಚಿಕಿತ್ಸೆ ಪಡೆದಿದ್ದಾರೆ. ಇನ್ನಿಬ್ಬರು ಯಾವುದೇ ಗಾಯಗಳಿಲ್ಲದೆ ಆಸ್ಪತ್ರೆಯಲ್ಲಿ ಸಹಜ ತಪಾಸಣೆ ನಿರ್ಗಮಿಸಿದ್ದಾರೆ ಎಂದು ವರದಿ ನೀಡಿದೆ.

ಎಲ್ಲ ಆಸ್ಪತ್ರೆಗಳು ಅಪಘಾತ ಅಥವಾ ಕಾನೂನಿನ ಅಡಿ ಬರುವ ವೈದ್ಯಕೀಯ ಪ್ರಕರಣಗಳನ್ನು ಎಂಎಲ್‍ಸಿ ಎಂದು ಪರಿಗಣಿಸಬೇಕಾಗುತ್ತದೆ. ಈಗ ಎಂಎಲ್‍ಸಿ, ಎಫ್‍ಐಆರ್, ಪೊಲೀಸ್ ಆಯುಕ್ತರ ಹೇಳಿಕೆಗಳಿಗೆ ಯಾವುದೇ ತಾಳೆ ಆಗದ ಕಾರಣ ಕಾರಿನಲ್ಲಿ ಇದ್ದವರು ಎಷ್ಟು? ಯಾಕೆ ಈ ವಿಚಾರವನ್ನು ಗೌಪ್ಯವಾಗಿ ಇಡಲಾಗಿದೆ ಎನ್ನುವ ಪ್ರಶ್ನೆ ಎದ್ದಿದೆ.

DARSHAN HSPT copy

ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್, ಈಗ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ. ಸದ್ಯ ಅಪಘಾತದ ಬಗ್ಗೆ ದರ್ಶನ್ ಅವರ ಡ್ರೈವರ್ ಲಕ್ಷಣ್ ನಮಗೆ ದೂರು ನೀಡಿದ್ದಾರೆ. ದೂರಿನ ಅನ್ವಯ 279, 338, 338 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಅಪಘಾತ ಸ್ಥಳದಲ್ಲಿ ಮಹಜರು ನಡೆಸಿದ್ದು ಗಾಯಾಳುಗಳ ಹೇಳಿಕೆ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

DARSHAN CAR copy 1

ಅಪಘಾತದ ವಾಹನ ವಶಕ್ಕೆ ಪಡೆದು ಆರ್ ಟಿಓ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಲಾಗಿದೆ. ಅವರ ವರದಿ ಆಧಾರದ ಮೇಲೆ ಕಾನೂನು ಪ್ರಕ್ರಿಯೆ ಮುಂದುವರಿಸುತ್ತೇವೆ. ಸದ್ಯದ ಮಾಹಿತಿ ಪ್ರಕಾರ ಕಾರಿನಲ್ಲಿ 5 ಮಂದಿ ಇದ್ದರು, ನಾಲ್ಬರಿಗೆ ಗಾಯವಾಗಿದೆ. ಕಾರು ಅಪಘಾತಕ್ಕಿಡಾಗಿದ್ದಕ್ಕೆ ಕಾರಣ ತನಿಖೆಯಿಂದಲೇ ಗೊತ್ತಾಗುತ್ತೆ. ಸದ್ಯ ತನಿಖೆ ಪ್ರಗತಿಯಲ್ಲಿರೋದರಿಂದ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಅಪಘಾತದ ಸ್ಥಳದಲ್ಲಿ ನಮ್ಮ ಪೊಲೀಸರು ಇದ್ದ ಬಗ್ಗೆ ಮಾಹಿತಿ ಇಲ್ಲ. ಹಾಗೇನಾದರೂ ಪೊಲೀಸರ ಸಮ್ಮುಖದಲ್ಲಿ ಕಾರು ಸ್ಥಳಾಂತರವಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ದರ್ಶನ್ ಕಾರು ಅಪಘಾತ ಪ್ರಕರಣದ ಕುರಿತು ತನಿಖೆ ನಡೆಸಲು ಪೊಲೀಸರಿಗೆ ಸಮಯ ಕೊಡಿ ಎಂದರು.

DARSHAN SPOT 1

ದರ್ಶನ್ ಕಾರು ಚಾಲಕ ಲಕ್ಷ್ಮಣ್ ದೂರಿನ ಮೇರೆಗೆ ಕೇಸ್ ದಾಖಲಿಸಲಾಗಿದೆ. ಅಪಘಾತವಾದಾಗ ಕಾರಿನಲ್ಲಿ ಐವರು ಇದ್ದರು ಅಂತ ಗೊತ್ತಾಗಿದೆ, ಆರು ಜನರೂ ಇರಬಹುದು. ಎಷ್ಟು ಜನ ಇದ್ದಾರೆ ಎಂಬುದನ್ನು ತನಿಖೆ ಮೂಲಕ ತಿಳಿದುಕೊಳ್ಳಲಾಗುವುದು. ದೂರಿನ ಪ್ರಕಾರ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಅಪಘಾತವಾಗಿದೆ. ಕಾರಿನಲ್ಲಿ ತಾಂತ್ರಿಕ ದೋಷ ಇತ್ತೋ ಇಲ್ಲವೋ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯಿಂದ ಗೊತ್ತಾಗಲಿದೆ. ಕೇವಲ 24 ಗಂಟೆಗಳಲ್ಲಿ ತನಿಖೆ ಮುಗಿಸಲು ಸಾಧ್ಯವಿಲ್ಲ ಎಂದು ಸುಬ್ರಮಣ್ಯೇಶ್ವರ ರಾವ್ ಪ್ರತಿಕ್ರಿಯಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

TAGGED:accidentcardarshanmysuruPublic TVsandalwoodTwistಅಪಘಾತಕಾರುಟ್ವಿಸ್ಟ್ದರ್ಶನ್ಪಬ್ಲಿಕ್ ಟಿವಿಮೈಸೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
10 minutes ago
Lakshmi Naik
Districts

ರೀಲ್ಸ್‌ನಲ್ಲಿ ಹವಾ ಮಾಡಿದ್ದ ʻಲಕ್ಷ್ಮಿ ಅಜ್ಜಿʼ ನಿಧನ

Public TV
By Public TV
22 minutes ago
RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
47 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
49 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
1 hour ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?