ರಾಂಚಿ: 11 ವರ್ಷದ ಬಾಲಕಿ ಮೇಲೆ ಆರು ಮಂದಿ ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿರುವ ಘಟನೆ ಮಂಗಳವಾರ ರಾತ್ರಿ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ.
ಇದೀಗ 10 ರಿಂದ 15 ವರ್ಷದೊಳಗಿನ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಸಮಾರಂಭಕ್ಕೆಂದು ಬಾಲಕಿ ಪಕ್ಕದ ಹಳ್ಳಿಗೆ ಹೋಗಿದ್ದಳು. ಒಂದು ನೃತ್ಯ ಕಾರ್ಯಕ್ರಮದ ವೇಳೆ ಬಾಲಕಿ ಬಾಲಕರೊಂದಿಗೆ ಜಗಳವಾಡಿದ್ದಾಳೆ. ಇದನ್ನೂ ಓದಿ: ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಬಳಿ ಶಾಶ್ವತವಾಗಿ ಇರಿಸಲಾಗಿದೆ: ರಾಜಸ್ಥಾನ ಸಿಎಂ
ಮಧ್ಯರಾತ್ರಿ ಹೊತ್ತಿಗೆ ಆಕೆ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಮನೆಗೆ ಹಿಂದಿರುಗುತ್ತಿದ್ದಾಗ, ಅವಳನ್ನು ಹಿಂಬಾಲಿಸಿಕೊಂಡು ಬಂದ ಹುಡುಗರು ಆಕೆಯನ್ನು ತಡೆದು ಏಕಾಂಗಿ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಸ್ಥಳದಿಂದ ತಪ್ಪಿಸಿಕೊಂಡ ಬಾಲಕಿ ಮತ್ತು ಆಕೆಯ ಇಬ್ಬರು ಸ್ನೇಹಿತರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಬಾಲಕಿಯನ್ನು ಹುಡುಕುತ್ತಾ ಬಂದ ಪೋಷಕರನ್ನು ನೋಡಿ ಆರೋಪಿಗಳು ಪರಾರಿಯಾಗಿದ್ದಾರೆ.
ಆರಂಭದಲ್ಲಿ ಸಮಾಜಕ್ಕೆ ಹೆದರಿ ಈ ಕುರಿತಂತೆ ಪ್ರಕರಣ ದಾಖಲಿಸಲು ಬಾಲಕಿಯ ಕುಟುಂಬಸ್ಥರು ಹಿಂದೇಟು ಹಾಕಿದರು. ಆದರೆ ಗುರುವಾರ ಪೊಲೀಸರಿಗೆ ಈ ಸಂಬಂಧ ದೂರು ನೀಡಿದ್ದಾರೆ. ಇದೀಗ ಪೊಲೀಸರು ಈ ಕುರಿತಂತೆ ತನಿಖೆ ನಡೆಸುತ್ತಿದ್ದು, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಗಲಭೆಯನ್ನು ನಿಯಂತ್ರಿಸುವಲ್ಲಿ ಅಮಿತ್ ಶಾ ಸಂಪೂರ್ಣ ವಿಫಲ: ಶರದ್ ಪವಾರ್
ಕೊನೆಗೆ ಗುರುವಾರ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರು ಆರೋಪಿಗಳನ್ನು ಬಂಧಿಸಿ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.