ಉತ್ತರ ಪ್ರದೇಶದಲ್ಲಿ ಕಾರು ಅಪಘಾತ – ಇಬ್ಬರು ಮಕ್ಕಳು ಸೇರಿ 6 ಮಂದಿ ನೇಪಾಳಿ ಪ್ರಜೆಗಳು ದುರ್ಮರಣ

Public TV
1 Min Read
ACCIDENT

ಲಕ್ನೋ: ಎಸ್‌ಯುವಿ ಕಾರು (Car) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕಂದಕಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ನೇಪಾಳಿ ಪ್ರಜೆಗಳು (Nepali Citizens) ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ (Uttar Pradesh) ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಶನಿವಾರ ಸಂಜೆ ಘಟನೆ ನಡೆದಿದ್ದು, ಎಸ್‌ಯುವಿ (SUV) ಕಾರು ಚಾಲಕ ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಅಪಘಾತ ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೃತಪಟ್ಟವರು ನೇಪಾಳದ ನೇಪಾಳಗಂಜ್ ನಗರದ ತ್ರಿಭುವನ್ ಚೌಕ್ ಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಮಣಿಪುರದಲ್ಲಿ ನಿಲ್ಲದ ಸಂಘರ್ಷ – ಕಳೆದ 24 ಗಂಟೆಗಳಲ್ಲಿ ಆರು ಮಂದಿ ಸಾವು

ಮೃತರನ್ನು ನಿಲಾಂಶ್ (36), ನೀತಿ (20), ದೀಪಿಕಾ (35), ವೈಭವ್ ಅಲಿಯಾಸ್ ಸೋನು (36) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟ ಅಪ್ರಾಪ್ತ ಮಕ್ಕಳ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: ಪತಿ ಲಂಚ ಪಡೆದಿದ್ದಕ್ಕೆ ಜೈಪುರ ಮೇಯರ್‌ ವಜಾ

ಘಟನೆಯಿಂದ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಹ್ರೈಚ್‌ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Web Stories

Share This Article